Saturday, April 20, 2024
spot_imgspot_img
spot_imgspot_img

ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಇಬ್ಬರ ಬಂಧನ..!

- Advertisement -G L Acharya panikkar
- Advertisement -
vtv vitla
vtv vitla

ಕೇರಳ: ಭಾರತೀಯ ಜನತಾ ಪಾರ್ಟಿ ಪಕ್ಷದ ಕಾರ್ಯಕರ್ತನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಯುವಕ ಹರಿಪಾದ್ ನ ಕುಮಾರಪುರಂ ಬಳಿಯ ವರ್ಯಂಕೋಡಿದ ಶರತ್ ಚಂದ್ರನ್ (26) ಎನ್ನಲಾಗಿದೆ.

11.30 ರ ಸುಮಾರಿಗೆ ಅಂದರೆ ಬುಧವಾರ ರಾತ್ರಿ ಚಂದ್ರನ್ ದೇವಸ್ಥಾನದಿಂದ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಹಿಂದೆ ಪುಥನ್ನರಿಯಲ್ ದೇವಿ ದೇವಸ್ಥಾನದಲ್ಲಿ ಶರತ್ ನೊಂದಿಗೆ ವಾಗ್ವಾದ ನಡೆಸಿದ ದುಷ್ಕರ್ಮಿಗಳು, ಆತನಿಗಾಗಿ ದೇವಸ್ಥಾನದ ಬಳಿ ಕಾಯುತ್ತಿದ್ದರೆನ್ನಲಾಗಿದೆ. ಈ ವೇಳೆ ಮತ್ತೆ ಅವರ ಜೊತೆ ಜಗಳ ನಡೆದಿದೆ. ಈ ಸಂದರ್ಭದಲ್ಲಿ ಚಂದ್ರನ್ ಗೆ ಚೂರಿ ಇರಿದಿದ್ದಾರೆ. ಆ ಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತನಾಗಿದ್ದಾನೆ.

ಸುಮಾರು 7,8 ಮಂದಿ ಈ ಕೃತ್ಯದಲ್ಲಿ ಇದ್ದು, ಕೇವಲ ಇಬ್ಬರನ್ನು ಮಾತ್ರ ಗುರುತಿಸಲು ಸಾಧ್ಯವಾಗಿದೆ. ಅವರನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

vtv vitla
vtv vitla
- Advertisement -

Related news

error: Content is protected !!