- Advertisement -
- Advertisement -
ಅಯೋಧ್ಯೆ: ದೇವಸ್ಥಾನದ ಒಳಗಿನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆದ್ದು, ಅರ್ಚಕರೊಬ್ಬರು ಫೇಸ್ ಬುಕ್ ನಲ್ಲಿ ಲೈವ್ ವಿಡಿಯೋ ಚಿತ್ರೀಕರಿಸಿ ಆತ್ಮಹತ್ಯೆಗೆ ಶರಣಾದ ಘಟನೆ
ಅಯೋಧ್ಯೆಯ ಕೊಟ್ವಾಲಿ ಪ್ರದೇಶದ ರಾಯಗಂಜ್ ಚೌಕಿ ಬಳಿ ನಡೆದಿದೆ.
ಅರ್ಚಕನನ್ನು ರಾಮ್ ಶಂಕರ್ ದಾಸ್ (28) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ರಾಮ್ ಶಂಕರ್ ವಿರುದ್ಧ ಈ ಹಿಂದೆ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬಳಿಗೆ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅರ್ಚಕ ರಾಮ್ ಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು ಈ ಘಟನೆಯಿಂದ ಅರ್ಚಕ ಮನನೊಂದಿದ್ದರು ಎಂದು ಮಾಹಿತಿ ನೀಡಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ವೇಳೆ ಅರ್ಚಕರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತಮ್ಮ ಫೇಸ್ಬುಕ್ ಲೈವ್ನಲ್ಲಿ ರಾಯ್ಗಂಜ್ ಪೊಲೀಸ್ ಔಟ್ಪೋಸ್ಟ್ನ ಉಸ್ತುವಾರಿ ಮತ್ತು ಕಾನ್ಸ್ಟೆಬಲ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ವಿಡಿಯೋ ಪತ್ತೆಯಾಗಿದೆ.
- Advertisement -