Sunday, May 12, 2024
spot_imgspot_img
spot_imgspot_img

ದೇವಿ ಸನ್ನಿಧಾನದ ಜಾತ್ರೆಗೆ ತೆರಳಿದಾಗ ಕಾರು ಅಪಘಾತ; ಇಬ್ಬರು ದುರ್ಮರಣ

- Advertisement -G L Acharya panikkar
- Advertisement -
vtv vitla

ಜಾತ್ರೆಗೆ ಹೋಗಿ ಬರುತ್ತಿದ್ದ ಕಾರೊಂದು ಅಪಘಾತಕ್ಕೆ ಒಳಗಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಪಾಳಾ ಗ್ರಾಮದಲ್ಲಿ ನಡೆದಿದೆ.

ಕಾರು ಮರಕ್ಕೆ ಡಿಕ್ಕಿಯಾಗಿ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಪಾಳಾ ಗ್ರಾಮದಲ್ಲಿ ನಡೆಯತ್ತಿದ್ದ ಮಾರಿಕಾಂಬಾ ದೇವಿಯ ಜಾತ್ರೆಗೆ ಹೋಗುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ಇನ್ನೊರ್ವನ ಸ್ಥಿತಿ ಕೂಡಾ ಗಂಭೀರವಾಗಿದೆ ಎನ್ನಲಾಗಿದೆ. ಅಪಘಾತದ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!