- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರ ಹಿನ್ನಲೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.
ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಿದ್ದು, ಎಲ್ಲಾ ರಾಜ್ಯಗಳ ಪರಿಸ್ಥಿತಿಯ ಬಗ್ಗೆ ತಿಳಿದು ಕೊರೋನಾ ತಡೆಗೆ ಬೇಕಾಗಿರುವ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ. ಸೋಂಕು ನಿಯಂತ್ರಣಕ್ಕೆ ಬಿಗಿ ಕ್ರಮ, ಆಕ್ಸಿಜನ್, ವೈದ್ಯಕೀಯ ಮೂಲಸೌಕರ್ಯ ವ್ಯವಸ್ಥೆ ಬಲವರ್ಧನೆ, ಲಸಿಕೆ ನೀಡಿಕೆಗೆ ವೇಗ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
- Advertisement -