Friday, March 29, 2024
spot_imgspot_img
spot_imgspot_img

ದ್ವಿತೀಯ ಪಿಯುಸಿ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ..! ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಗಳಿಸಿದ ಮನ್ವಿತ ಎನ್ ಪಿ ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ

- Advertisement -G L Acharya panikkar
- Advertisement -

ಪುತ್ತೂರು: 2021-22ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವಕಾಲೇಜಿಗೆ ಶೇ 96 ಫಲಿತಾಂಶವನ್ನು ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಗಳಿಸುವುದರ ಮೂಲಕ ಮನ್ವಿತ ಎನ್ ಪಿ ಇವರು ಪುತ್ತೂರುತಾಲೂಕಿಗೆ ಮತ್ತುಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಭೌತಶಾಸ್ತ್ರದಲ್ಲಿ 100, ರಸಾಯನಶಾಸ್ತ್ರದಲ್ಲಿ 100, ಗಣಿತಶಾಸ್ತ್ರದಲ್ಲಿ 100, ಜೀವಶಾಸ್ತ್ರದಲ್ಲಿ 100, ಸಂಸ್ಕೃತದಲ್ಲಿ 100 ಮತ್ತುಇಂಗ್ಲಿಷ್ 94 ಅಂಕಗಳನ್ನು ಪಡೆಯುವುದರ ಮೂಲಕ ಒಟ್ಟು 594 ಅಂಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿಯನ್ನುತಂದಿದ್ದಾರೆ. ಈಕೆ ಕಾಸರಗೋಡಿನ ನೀರ್ಚಾಲಿನ ಪುರುಷೋತ್ತಮ ಶರ್ಮ ಮತ್ತು ಸುಮಾದಂಪತಿ ಪುತ್ರಿ.

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಾಧನೆ

589 ಅಂಕಗಳನ್ನು ಗಳಿಸುವುದರ ಮೂಲಕ ಸ್ತುತಿ ಎಂ. ಎಸ್‌ ಇವರು ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈಕೆ ನೆಹರೂ ನಗರದ ಶ್ರೀಕೃಷ್ಣ ಗಣರಾಜ್ ಭಟ್ ಮತ್ತು ಸೌಮ್ಯ ಎಂ ಇವರ ಸುಪುತ್ರಿ. 589 ಅಂಕಗಳನ್ನು ಗಳಿಸುವುದರ ಮೂಲಕ ಪ್ರಾಪ್ತಿ ಗಂಭೀರ್‌ ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈಕೆ ಪುತ್ತೂರಿನ ಕೈಕಾರದ ವಿರೇಂದ್ರ ಎನ್‌ ಗಂಭೀರ್ ಮತ್ತು ಸೌಮ್ಯ ದಂಪತಿ ಪುತ್ರಿ. 589 ಅಂಕಗಳನ್ನು ಗಳಿಸುವುದರ ಮೂಲಕ ಎಂ. ವಿಶಾಖ್‌ ಕಾಮತ್‌ ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈತನು ಪುತ್ತೂರಿನ ಬೊಳುವಾರಿನ ಎಂ. ವಿದ್ಯಾಧರ್‌ ಕಾಮತ್ ಮತ್ತು ಎಂ. ಮುಕ್ತ ಕಾಮತ್‌ ದಂಪತಿ ಪುತ್ರ.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಸಾಧನೆ
ವಾಣಿಜ್ಯ ವಿಭಾಗದಲ್ಲಿ ದೀಪ್ನಾ ಜೆ 593 ಅಂಕಗಳನ್ನು ಪಡೆಯುವುದರ ಮೂಲಕ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈಕೆ ಕಾಸರಗೋಡಿನ ಮುಂಡಿತ್ತಡ್ಕದ ಎಸ್. ನಾರಾಯಣ ಮತ್ತು ಪುಷ್ಪ ಕೆ ದಂಪತಿ ಪುತ್ರಿ. 588 ಅಂಕಗಳನ್ನು ಪಡೆಯುವುದರ ಮೂಲಕ ಚೈತ್ರಾ ಎನ್‌ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಈಕೆ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯದ ಚಂದ್ರ ಮತ್ತು ಶಶಿಕಲಾ ದಂಪತಿಗಳ ಪುತ್ರಿ
.

ಕಲಾ ವಿಭಾಗದ ವಿದ್ಯಾರ್ಥಿಗಳ ಸಾಧನೆ
ಕಲಾ ವಿಭಾಗದಲ್ಲಿ 580 ಅಂಕಗಳನ್ನು ಪಡೆಯುವುದರ ಮೂಲಕ ಉಡುಪಿಯ ಹೆಬ್ರಿಯ ಸಹದೇವ ಶೆಟ್ಟಿ ಮತ್ತು ವಸಂತ ಶೆಟ್ಟಿಇವರ ಪುತ್ರ ವಾಸುದೇವ ತಿಲಕ್‌ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. 579 ಅಂಕಗಳನ್ನು ಪಡೆಯುವುದರ ಮೂಲಕ ಉರಿಮಜಲಿನ ವಿಶ್ವನಾಥ ಎಂ ಮತ್ತು ವಿದ್ಯಾ ಕೆ ಇವರ ಪುತ್ರಿ ದಿಶಾ ಎಂಇವರು ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. 579 ಅಂಕಗಳನ್ನು ಪಡೆಯುವುದರ ಮೂಲಕ ವರ್ಷಾ ಎ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಈಕೆ ಶಿವಮೊಗ್ಗದ ಭದ್ರಾವತಿಯ ಆನಂದರಾಜ್‌ ಆರ್ ಮತ್ತು ದೀಪಾಲಕ್ಮೀ ಕೆ ದಂಪತಿ ಪುತ್ರಿ.

ವಿಜ್ಞಾನ ವಿಭಾಗದ ಒಟ್ಟು 335 ಮಂದಿ ವಿದ್ಯಾರ್ಥಿಗಳಲ್ಲಿ 140 ಮಂದಿ ಡಿಸ್ಟಿಂಕ್ಷನ್, 164 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 93.73 ಫಲಿತಾಂಶ, ವಾಣಿಜ್ಯ ವಿಭಾಗದ ಒಟ್ಟು 264 ವಿದ್ಯಾರ್ಥಿಗಳಲ್ಲಿ 91 ಮಂದಿ ಡಿಸ್ಟಿಂಕ್ಷನ್ ಹಾಗೂ 124 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 93.56 ಫಲಿತಾಂಶ, ಕಲಾ ವಿಭಾಗದ ಒಟ್ಟು 46 ವಿದ್ಯಾರ್ಥಿಗಳಲ್ಲಿ 20 ಮಂದಿ ಡಿಸ್ಟಿಂಕ್ಷನ್, 19 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 100 ಫಲಿತಾಂಶ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಕೃಷ್ಣಪ್ರಸಾದ್ ನಡ್ಸಾರ್, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಶಿಕ್ಷಕ-ರಕ್ಷಕ ಸಂಘ ಹಾಗೂ ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!