Monday, April 29, 2024
spot_imgspot_img
spot_imgspot_img

ದ್ವೇಷ ಭಾಷಣ ಪ್ರಕರಣ; ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾದ ಅಜಂ ಖಾನ್ ಶಾಸಕ ಸ್ಥಾನ ಅನರ್ಹ

- Advertisement -G L Acharya panikkar
- Advertisement -

ಉತ್ತರ ಪ್ರದೇಶ: ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

ಅಜಂಖಾನ್‌ರನ್ನು ಉತ್ತರ ಪ್ರದೇಶ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ. ಉತ್ತರ ಪ್ರದೇಶ ವಿಧಾನಸಭೆ ಸ್ಪೀಕರ್ ಶುಕ್ರವಾರ ಈ ವಿಚಾರವನ್ನು ಘೋಷಿಸಿದರು.

2019ರ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಂ ಖಾನ್ ದೋಷಿ ಎಂಬುದಾಗಿ ನಿನ್ನೆಯಷ್ಟೇ ಉತ್ತರ ಪ್ರದೇಶದ ರಾಮಪುರ ನ್ಯಾಯಾಲಯವು ಘೋಷಿಸಿತು. ಅಲ್ಲದೆ, ಅಜಂ ಖಾನ್ ಹಾಗೂ ಇನ್ನಿತರ ಇಬ್ಬರು ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಆಜಂ ಖಾನ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪವಿತ್ತು.

- Advertisement -

Related news

error: Content is protected !!