- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರ್ಕಾರಿ ಅಪರ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಸರ್ಕಾರ ಅರ್ಜಿ ಆಹ್ವಾನಿಸಿದೆ.
ಈಗಾಗಲೇ ವಕೀಲ ವೃತ್ತಿಯಲ್ಲಿ ಇರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಹೀಗಿವೆ:
1) ವಿದ್ಯಾರ್ಹತೆ – ಶೈಕ್ಷಣಿಕ ದಾಖಲೆ
2) ಹುಟ್ಟಿದ ದಿನಾಂಕ ದೃಢಪಡಿಸುವ ದಾಖಲೆ
3) ಜಾತಿ, ವರ್ಗ (ಜಾತಿ ಪ್ರಮಾಣ ಪತ್ರ) ಮತ್ತು
4) 7 ವರ್ಷ ವಕೀಲ ವೃತ್ತಿಯನ್ನು ಪೂರೈಸಿರುವ ದಾಖಲೆ
5) ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವ ಇರುವ ವಿವರ
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 15, 2021
ಅರ್ಜಿ ಹಾಗೂ ಪೂರಕ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯ ಕಾನೂನು ಶಾಖೆಯಲ್ಲಿ ಪಡೆಯಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -