- Advertisement -
- Advertisement -
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ. ಕುಮಾರ್ ಅವರಿಗೆ ವಹಿಸಲಾಗಿತ್ತು.
ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ. ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಐಎಎಸ್ ರವಿಕುಮಾರ್ ಎಂ. ಆರ್. ಅವರು ಅಧಿಕಾರ ಚುಕ್ಕಾಣಿ ಏರಿದ್ದಾರೆ. ರವಿಕುಮಾರ್ ಅವರು 2012ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಆಗಿದ್ದು, ಈ ಹಿಂದೆ ಆರ್ಜಿಯುಎಚ್ಎಸ್ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದರು.
- Advertisement -