- Advertisement -
- Advertisement -
ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಲ್ಲಿ ಅನ್ಯಕೋಮಿನ ಅಪ್ರಾಪ್ತ ಜೋಡಿಯನ್ನು ತಡೆದ ಹಿಂದೂ ಸಂಘಟನಾ ಕಾರ್ಯಕರ್ತರು ಧರ್ಮಸ್ಥಳ ಪೊಲೀಸರಿಗೊಪ್ಪಿಸಿದ ಘಟನ ಕೊಕ್ಕಡದಲ್ಲಿ ಸೋಮವಾರದಂದು ರಾತ್ರಿ ನಡೆದಿದೆ.
ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ವ್ಯಾಪ್ತಿಯ ಒಂದೇ ಕಾಲೇಜಿನ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಬ್ಬರು (ಹಿಂದೂ ಬಾಲಕಿ ಮತ್ತು ಮುಸ್ಲಿಂ ಬಾಲಕ) ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ರಾತ್ರಿ ವಾಪಾಸ್ ಬಸ್ ನಲ್ಲಿ ಹೋಗುತ್ತಿದ್ದ ವೇಳೆ ಮಾಹಿತಿ ತಿಳಿದ ಹಿಂದೂ ಸಂಘಟನಾ ಕಾರ್ಯಕರ್ತರು ಧರ್ಮಸ್ಥಳ ಪೊಲೀಸರಿಗೆ ನೀಡಿದರು. ಅದರಂತೆಯೇ ಧರ್ಮಸ್ಥಳ ಪೊಲೀಸರು ಬೆಂಗಳೂರು ದೇವನಹಳ್ಳಿ ಠಾಣೆಗೆ ಮಾಹಿತಿ ನೀಡಿದ್ದಾರೆ.
ಹಿಂದೂ ಯುವತಿಯರೊಂದಿಗೆ ಮುಸ್ಲಿಂ ಯುವಕರು..! ಕಾರ್ಯಕರ್ತರು ಗರಂ..!
ಇಂತಹದ್ದೇ ಮತ್ತೊಂದು ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಂಗಳೂರಿನ ಪಡೀಲ್ ಎಂಬಲ್ಲಿ ಮುಸ್ಲಿಂ ಯುವಕರೊಂದಿಗೆ ಇದ್ದ ಯುವತಿಯನ್ನು ಹಿಂದೂ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ತರಾಟೆಗೆ ತೆಗೆದುಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- Advertisement -