Tuesday, May 7, 2024
spot_imgspot_img
spot_imgspot_img

ಧರ್ಮಸ್ಥಳ: ವಿಷಕಾರಿ ಅಣಬೆ ಪದಾರ್ಥ ಸೇವಿಸಿ ತಂದೆ-ಮಗ ಸಾವು

- Advertisement -G L Acharya panikkar
- Advertisement -

ಪುದುವೆಟ್ಟು: ಧರ್ಮಸ್ಥಳ ಸಮೀಪದ ಪುದುವೆಟ್ಟು ಗ್ರಾಮ ಕೇರಿಮಾರು ಎಂಬಲ್ಲಿ ತಂದೆ- ಮಗ ವಿಷಕಾರಿ ಅಣಬೆ ಪದಾರ್ಥ ಸೇವಿಸಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಮೃತರನ್ನು ತಂದೆ ಗುರುವ(85) ಮಗ ಓಡಿ (45) ಮೃತಪಟ್ಟ ದುರ್ದೈವಿಗಳು .

ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಹೀಗಾಗಿ ಅಣಬೆ ಸೇವನೆಯ ಪದಾರ್ಥ ಸೇವನೆಯೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಅವಘಡ ತಪ್ಪಿದೆ. ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿದ್ದು. ತನಿಖೆ ಬಳಿಕ ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.

- Advertisement -

Related news

error: Content is protected !!