Sunday, June 29, 2025
spot_imgspot_img
spot_imgspot_img

ಧರ್ಮಸ್ಥಳ: ಶಾಲಾ ಪ್ರವಾಸ ಬಸ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಅಪಘಾತ; ಚಾಲಕರಿಬ್ಬರು ಗಂಭೀರ

- Advertisement -
- Advertisement -

ಧರ್ಮಸ್ಥಳ: ಬಸ್‌ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಹಲವಾರು ಗಾಯಗೊಂಡ ಘಟನೆ ನಿಡ್ಲೆಯ ಬೂಡುಜಾಲು ಎಂಬಲ್ಲಿ ನಡೆದಿದೆ.

ಸಿಂದನೂರಿನ ಶಾಲಾ ಮಕ್ಕಳ ಪ್ರವಾಸ ಬಸ್‌ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದು, ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಅಪಘಾತವು ಇಂದು ಮಧ್ಯಾಹ್ನ ಸಂಭವಿಸಿದೆ. ಅಪಘಾತದಿಂದ ಎರಡು ಬಸ್ಸಿನ ಚಾಲಕರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವೇಳೆ ಸ್ಥಳದಲ್ಲಿ ಕೆಲವು ಹೊತ್ತು ಟ್ರಾಫಿಕ್‌ ಜಾಮ್‌ ಸಂಭವಿಸಿ ವಾಹನ ಸವಾರರೂ ಪರದಾಡುವಂತಾಯಿತು.

- Advertisement -

Related news

error: Content is protected !!