Friday, June 27, 2025
spot_imgspot_img
spot_imgspot_img

”ನನ್ನ ಸಾವಿಗೆ ಪೊಲೀಸರೇ ಕಾರಣ” ಎಂದು ಬರೆದು ವ್ಯಕ್ತಿ ನೇಣಿಗೆ ಶರಣು..!!

- Advertisement -
- Advertisement -

vtv vitla
vtv vitla

ಚಿತ್ರದುರ್ಗ: ವ್ಯಕ್ತಿಯೋರ್ವ ”ನನ್ನ ಸಾವಿಗೆ ಪೊಲೀಸರೇ ಕಾರಣ” ಎಂದು ಗೋಡೆ ಮೇಲೆ ಬರೆದು, ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ಮುಂಭಾಗದ ಕಟ್ಟಡದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೊಮ್ಮನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ (30) ಎಂದು ಗುರುತಿಸಲಾಗಿದೆ. ವೆಂಕಟೇಶ​ನ ಮೃತ ದೇಹವನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಹಿರಿಯೂರು ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವೆಂಕಟೇಶ್ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡಿದ್ದನು. ಆತ ಕುಡಿತದ ದುಶ್ಚಟಕ್ಕೆ ಒಳಗಾಗಿ ರಾತ್ರಿ ವೇಳೆ ಬಸ್ ನಿಲ್ದಾಣ ಸೇರಿದಂತೆ ಎಲ್ಲೆಂದರಲ್ಲಿ ತಂಗುತ್ತಿದ್ದ. ಕಳೆದ ಎರಡು ತಿಂಗಳಿನಿಂದ ಮನೆಗೆ ಬಂದಿರಲಿಲ್ಲ. ಆತನಿಗೆ ಮದುವೆ ಮಾಡಲು ಹುಡುಗಿ ನೋಡುತ್ತಿದ್ದೆವು ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ.

- Advertisement -

Related news

error: Content is protected !!