- Advertisement -
- Advertisement -
ನವಜಾತ ಗಂಡು ಶಿಶುವನ್ನು ಯಶವಂತಪುರ ಬಳಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಬಿಟ್ಟು ಹೋದ ಅಮಾನವೀಯ ಘಟನೆ ನಡೆದಿದೆ.
ಮಂಗಳವಾರ ತಡರಾತ್ರಿ 2.30ರ ಸುಮಾರಿಗೆ ಆಗಷ್ಟೇ ಜನಿಸಿದ ಗಂಡು ಮಗುವನ್ನು ದೇವಸ್ಥಾನದ ಬಾಗಿಲ ಬಳಿ ಇಟ್ಟು ಹೋಗಿದ್ದಾರೆ.
ಮಧ್ಯರಾತ್ರಿಯಲ್ಲಿ ಒಂದೇ ಸಮನೇ ಮಗು ಅಳುವ ಶಬ್ದ ಕೇಳಿ ಹೊರಗೆ ಬಂದು ನೋಡಿದಾಗ ದೇವಸ್ಥಾನದ ಬಳಿ ಮಗು ಪತ್ತೆ ಆಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಮಗುವಿನ ರಕ್ಷಣೆ ಮಾಡಿ,ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಶಿಶುವನ್ನು ಕರೆದೊಯ್ದು ದಾಖಲಿಸಿದ್ದಾರೆ. ಐಪಿಸಿ 317 ಅಡಿಯಲ್ಲಿ ಯಶವಂತಪುರ ಠಾಣೆಯಲ್ಲಿಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
- Advertisement -