Wednesday, April 24, 2024
spot_imgspot_img
spot_imgspot_img

ನವವಿವಾಹಿತೆ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಮಾಡಿಕೊಂಡರಾ ಗ್ರಾಮ ಲೆಕ್ಕಾಧಿಕಾರಿ..!!

- Advertisement -G L Acharya panikkar
- Advertisement -

ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೈಸೂರು ಜಿಲ್ಲೆಯ ಹಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.

ಕೃಷ್ಣಾಬಾಯಿ ತುಕಾರಾಂ ಪಡ್ಕೆ(25) ಮೃತ ಮಹಿಳೆ. ಮೃತ ಕೃಷ್ಣಾಬಾಯಿ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಎಸ್​ಗಳ್ಳಿ ಗ್ರಾಮದವರು. ಒಂದು ತಿಂಗಳ ಹಿಂದಷ್ಟೇ ಕೃಷ್ಣಾಬಾಯಿ ಅವರ ಮದುವೆ ನಡೆದಿತ್ತು. ದೀರ್ಘ ರಜೆಯಲ್ಲಿದ್ದ ಕೃಷ್ಣಾಬಾಯಿ ನಾಲ್ಕು ದಿನಗಳ ಹಿಂದಷ್ಟೇ ಸೇವೆಗೆ ಹಿಂದಿರುಗಿದ್ದರು. ಇದೀಗ ಕೃಷ್ಣಾಬಾಯಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನು ಕೃಷ್ಣಾಬಾಯಿ ಅವರ ಪತಿ ಸುಬಾಸ್ ಬೋಸ್ಲೆ ಹನೂರಿನ ಅರಣ್ಯ ಇಲಾಖೆಯ ಫಾರೆಸ್ಟ್ ಗಾರ್ಡ್ ​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೃಷ್ಣಾಬಾಯಿ ಸಹೋದ್ಯೋಗಿ ಗ್ರಾಮ ಲೆಕ್ಕಾಧಿಕಾರಿ ಚೈತ್ರ ಮತ್ತು ಅವರ ತಾಯಿಯೊಂದಿಗೆ ಬಿಳಿಕೆರೆಯ ಎಸ್​ಬಿಐ ಹಿಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

ಕೃಷ್ಣಾಬಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!