Monday, May 6, 2024
spot_imgspot_img
spot_imgspot_img

ನಾಗದೇವರ ಮೂರ್ತಿಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು..! ಹಿಂದೂ ಪರ ಸಂಘಟನೆಗಳಿಂದ ತೀವ್ರ ಖಂಡನೆ

- Advertisement -G L Acharya panikkar
- Advertisement -

ನಾಗದೇವರ ಕಲ್ಲುಗಳನ್ನು ಕಲ್ಲಿನಿಂದ ಹೊಡೆದು ಧ್ವಂಸಗೊಳಿಸಿದ ಘಟನೆ ನಡೆದಿದೆ. ಬೆಂಗಳೂರು-ಹೊಸೂರು ಮುಖ್ಯರಸ್ತೆಯ ಚಿಕ್ಕತೋಗೂರಿನಲ್ಲಿ ಕಿಡಿಗೇಡಿಗಳು ನಾಗದೇವರ ಕಲ್ಲುಗಳನ್ನು ಧ್ವಂಸಗೊಳಿಸಿದ್ದಾರೆ. ಹೆದ್ದಾರಿಯ ಪಕ್ಕದಲ್ಲಿಯೇ ಇರುವ ನಾಗದೇವರ ಅರಳಿಕಟ್ಟೆಯಲ್ಲಿರುವ ನಾಗದೇವರ ಮೂರ್ತಿಯನ್ನು ಕಲ್ಲಿನಿಂದ ಹೊಡೆದು ವಿರೂಪಗೊಳಿಸಲಾಗಿದೆ. ದೇವರ ಮೂರ್ತಿಯನ್ನು ವಿರೂಪಗೊಳಿಸಿದ್ದು ಬೆಳಗ್ಗೆ ಬಯಲಿಗೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಬಜರಂಗದಳ ಮತ್ತು ಹಿಂದೂ ಪರ ಹೋರಾಟಗಾರರು ತಕ್ಷಣವೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾತ್ರಿ ವೇಳೆ ಬಂದ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಭಾಗದಲ್ಲಿ ಸಾಕಷ್ಟು ಸಿಸಿಟಿವಿಗಳಿದ್ದು, ಅವುಗಳ ಫೂಟೇಜ್‌ಗಳನ್ನು ಗಮನಿಸಲಾಗುತ್ತಿದ್ದು, ದುಷ್ಕರ್ಮಿಗಳು ಸಿಕ್ಕಿಬೀಳುವ ಸಾಧ್ಯತೆ ಖಚಿತವಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿಗೆ ಒಳಪಡುವ ಚಿಕ್ಕತೋಗೂರಿನ ಅರಳಿ ಕಟ್ಟೆ ಬಳಿ ಈ ನಾಗದೇವರ ಕಟ್ಟೆ ಇದ್ದು, ಸುಮಾರು 30 ವರ್ಷಗಳಿಂದ ಇಲ್ಲಿ ಪೂಜೆ ಪುನಸ್ಕಾರ ನಡೆಯುತ್ತಿದೆ. ಮಂಗಳವಾರ ರಾತ್ರಿ ಯಾರೋ ದುಷ್ಕರ್ಮಿಗಳು ಬಂದು ಈ ವಿಕೃತಿ ಮೆರೆದಿದ್ದಾರೆ.

- Advertisement -

Related news

error: Content is protected !!