Tuesday, April 16, 2024
spot_imgspot_img
spot_imgspot_img

ನಾಲ್ಕು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವಜೋಡಿ ರಸ್ತೆ ಅಪಘಾತದಲ್ಲಿ ಭೀಕರ ಸಾವು!

- Advertisement -G L Acharya panikkar
- Advertisement -

ತಮಿಳುನಾಡು: ಇಲ್ಲಿನ ತಿರುವಳ್ಳೂರು ಜಿಲ್ಲೆಯಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಮದುವೆ ಆಗಿದ್ದ ನವಜೋಡಿ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದಂಪತಿ ಅರಕ್ಕೊಣಮ್​ ಮೂಲದ ಮನೋಜ್​ ಕುಮಾರ್​ (31) ಮತ್ತು ಪೆರುಗಲಥೂರ್​ ಮೂಲದ ಕಾರ್ತಿಕಾ (30) ಎಂದು ತಿಳಿದುಬಂದಿದೆ.

ಮನೋಜ್​ ಕುಮಾರ್​ ಅವರು ಮೆಡಿಕಲ್​ ರೆಪ್​ ಆಗಿ ಕೆಲಸ ಮಾಡುತ್ತಿದ್ದರು. ಕಾರ್ತಿಕಾ ಖಾಸಗಿ ಕ್ಲೀನಿಕ್​ ಒಂದರಲ್ಲಿ ವೈದ್ಯೆ ಆಗಿದ್ದರು. ಅ. 28ರಂದು ಇಬ್ಬರು ಮದುವೆ ಆಗಿದ್ದರು. ಪೂನಮೆಲೀ-ಅರಕ್ಕೊಣಮ್​ ಹೆದ್ದಾರಿ ನಡುವಿನ ಕಡಂಬಥೂರ್​ ಸಮೀಪ ಭಾನುವಾರ ರಾತ್ರಿ 9.45ರ ಸುಮಾರಿಗೆ ಎದುರಿನಿಂದ ಬಂದ ಕಾಂಕ್ರಿಟ್​ ಮಿಕ್ಸರ್​ ಲಾರಿ ತಿರುವ ಪಡೆಯಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ​ ಕಾರಿನ ಮೇಲೆ ಬಿದ್ದಿದೆ.

ಮಿಕ್ಸರ್​ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಘಟನೆ ನಡೆದ ಎರಡು ಗಂಟೆಯ ನಂತರ ಮಿಕ್ಸರ್​ ಲಾರಿಯನ್ನು ತೆರವುಗೊಳಿಸಲಾಯಿತು. ಇದರ ಬೆನ್ನಲ್ಲೇ ಸ್ಥಳಕ್ಕೆ ಆಂಬ್ಯುಲೆನ್ಸ್​ ದೌಡಾಯಿಸಿತು. ಆದರೆ, ಅಷ್ಟರಲ್ಲಾಗಲೇ ದಂಪತಿಗಳಿಬ್ಬರು ಸಾವಿಗೀಡಾಗಿದ್ದರು. ಘಟನೆಯ ಬೆನ್ನಲ್ಲೇ ಮಿಕ್ಸರ್​ ಲಾರಿ ಡ್ರೈವರ್​ ಎಸ್ಕೇಪ್​ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಡ್ರೈವರ್​ಗಾಗಿ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!