Saturday, May 4, 2024
spot_imgspot_img
spot_imgspot_img

ನಾಳೆ ತೆರೆಕಾಣಲಿರುವ ಪಿಲಿ ತುಳುಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ..! ನಿರ್ಮಾಪಕರಿಗೆ ನಡೆದಿದ್ಯಾ ವಂಚನೆ..?!

- Advertisement -G L Acharya panikkar
- Advertisement -

ಕರಾವಳಿಯಾದ್ಯಂತ ನಾಳೆ ಬಿಡುಗಡೆಗೆ ಸಿದ್ಧವಾಗಿರುವ ಪಿಲಿ ತುಳು ಚಿತ್ರ ಥಿಯೇಟರ್‌ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.

ಮಂಜೀತ್ ನಾಗರಾಜ್ ಎಂಬವರು ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣಲು ತಡೆಯನ್ನು ಕೋರಿ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಮಂಜೀತ್ ನಾಗರಾಜ್ ಪ್ರಕಾರ ಈ ಚಿತ್ರಕ್ಕೆ 40 ಲಕ್ಷ ಬಂಡವಾಳ ಹೂಡಿದ್ದಾರೆ. ಆದರೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರನ್ನು ಕಡೆಗಣಿಸಿ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಇದೀಗ ನಿರ್ಮಾಪಕ ಮಂಜೀಪ್ ಅವರ ಮನವಿ ಪುರಸ್ಕರಿಸಿದ ನ್ಯಾಯಾಲಯವು ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.

ಈ ಬಗ್ಗೆ ಮಾಧ್ಯಮೊಂದಕ್ಕೆ ಪ್ರತಿಕ್ರಿಯೆ ನೀಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್ ಭಂಡಾರಿ ಎಂಬಾತ ಚಿತ್ರದ ನಿರ್ಮಾಣಕ್ಕಾಗಿ ನನ್ನಿಂದ 40 ಲಕ್ಷ ಬಂಡವಾಳ ಪಡೆದು ಮೊದಲ ಹಂತದ ಚಿತ್ರೀಕರಣ ಮುಗಿದ ಬಳಿಕ ಹಣ ಪಡೆದು ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು.

ಆದರೀಗ ಬೇರೆ ಯಾವುದೋ ನಿರ್ಮಾಪಕರ ಹೆಸರು ಹಾಕಿಕೊಂಡು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ನನಗೂ ಹಾಗೂ ಹಣ ಪಡೆದ ಇತರ ಸಹನಿರ್ಮಾಪಕರಿಗೂ ವಂಚಿಸಿದ್ದಾರೆ ಎಂದು ಮಂಜೀತ್ ನಾಗರಾಜ್ ಅವರು ಆರೋಪಿಸಿದ್ದಾರೆ. ಹಾಗೂ ಕೋರ್ಟ್‌ ನಲ್ಲಿ ಭರತ್ ಭಂಡಾರಿ ವಿರುದ್ಧ ಮತ್ತು ಚಿತ್ರ ಪ್ರದರ್ಶನ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!