- Advertisement -
- Advertisement -
ಹಾಸನ: ನಿಂತಿದ್ದ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಎರಡಕ್ಕೂ ಹೆಚ್ಚು ಭೋಗಿಗಳು ಸುಟ್ಟು ಕರಕಲಾಗಿರುವ ಘಟನೆ ಅರಸಿಕೆರೆ ಜಂಕ್ಷನ್ ಸಮೀಪದ ಅಂಚೆಕೊಪ್ಪಲು ಬಳಿ ಮಂಗಳವಾರ ರಾತ್ರಿ ಈ ಅವಘಡ ಸಂಭವಿಸಿದೆ.
ಸೂಕ್ತ ಸಮಯಕ್ಕೆ ಅಗ್ನಿಶಾಮಕ ಪಡೆ ಆಗಮಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಅವಘಡ ಸಂಭವಿಸುವುದಕ್ಕೂ ಮುನ್ನ ಬೆಂಕಿಯನ್ನು ನಂದಿಸಲಾಗಿದೆ. ರೈಲ್ವೆ ಪೊಲೀಸರ ಮಾಹಿತಿಯ ಪ್ರಕಾರ ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅರಸಿಕೆರೆ ಜಂಕ್ಷನ್ ನಲ್ಲಿ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳನ್ನು ಕೆಲವು ದಿನಗಳಿಂದ ನಿಲ್ಲಿಸಲಾಗಿತ್ತು. ಒಂದು ಮೂಲದ ಪ್ರಕಾರ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.
- Advertisement -