- Advertisement -
- Advertisement -
ಮೈಸೂರು: ಮಳೆಯಿಂದಾಗಿ ಮರ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿದ ಘಟನೆ ಮೈಸೂರು- ಬೆಂಗಳೂರು ರಸ್ತೆಯ ಫೈವ್ ಲೈಟ್ ವೃತ್ತದಲ್ಲಿ ನಡೆದಿದೆ.
ನಿರಂತರವಾಗಿ ಸುರಿದ ಮಳೆಯಿಂದಾಗಿ ಮರ ಉರುಳಿ ಅನಾಹುತ ಸಂಭವಿಸಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಎನ್.ಆರ್. ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪಾಲಿಕೆ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆ ನಡೆದಿದೆ.
- Advertisement -