- Advertisement -
- Advertisement -
ನೆಟ್ಲಮುಡ್ನೂರು: ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಕೆ.ಎನ್.ಕೇಶವ ಆಳ್ವ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ವಿಜಯಾ ಬ್ಯಾಂಕ್ ಅಧಿಕಾರಿಯಾಗಿ, ಸೀನಿಯರ್ ಮೆನೇಜರ್ ಆಗಿ ವಿಜಯಾ ಬ್ಯಾಂಕಿನಲ್ಲಿ 30 ವರ್ಷಕ್ಕಿಂತಲೂ ಹೆಚ್ಚು ಸೇವೆ ಸಲ್ಲಿಸಿ, ವಿಜಯಾ ಬ್ಯಾಂಕ್ ನೌಕರರ ಯೂನಿಯನ್ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿ, ಕರಿಂಕ ಕುಟುಂಬಸ್ಥರ ದೈವ ದೇವರ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಸೇವಾಕರ್ತರಾಗಿ ಸೇವೆ ಸಲ್ಲಿಸಿರುವ ಇವರು ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ಪುತ್ರ ಖ್ಯಾತ ಸರ್ಜನ್ ಡಾ.ಅಶ್ವಿನ್ ಆಳ್ವ ಸಹಿತ ಇಬ್ಬರು ಗಂಡು ಮಕ್ಕಳು ಹಾಗೂ ಸಹೋದರ ತುಂಬೆ ಪ.ಪೂ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ, ಓರ್ವ ಸಹೋದರಿ ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
- Advertisement -