Saturday, April 27, 2024
spot_imgspot_img
spot_imgspot_img

ನೆಲ್ಯಾಡಿ: ಉದನೆಯಲ್ಲಿ ಗಣಪತಿ ಕಟ್ಟೆಯನ್ನು ಪುಡಿಗೈದು ಹಾನಿ!

- Advertisement -G L Acharya panikkar
- Advertisement -

ನೆಲ್ಯಾಡಿ: ಕಡಬ ತಾಲೂಕಿನ ಉದನೆಯಲ್ಲಿ ತಡರಾತ್ರಿ ಯಾರೋ ಸಮಾಜಘಾತುಕರು ಗಣಪತಿ ಕಟ್ಟೆಯನ್ನು ಪುಡಿ ಮಾಡಿರುವ ಘಟನೆ ನಡೆದಿದೆ.

ಉದನೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು 19ನೇ ವರ್ಷದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಸೂಚನೆಯಂತೆ ನಿನ್ನೆ ಸರಳವಾಗಿ ಗಣಪತಿ ಮೂರ್ತಿಯ ವಿಸರ್ಜನೆಯನ್ನು ಮಾಡಿದ್ದರು. ಅಲ್ಲದೆ ರಾತ್ರಿ 11:00 ರವರೆಗೂ ಸಮಿತಿಯ ತಂಡ ಗಣಪತಿ ಕಟ್ಟೆಯ ಬಳಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಗಣಪತಿಯನ್ನು ಕುಳ್ಳಿರಿಸಿದ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಇಂದು ಮುಂಜಾನೆ ಬಾಳೆಗಿಡಗಳನ್ನು ಪುಡಿಗೈಯ್ಯಲಾಗಿದ್ದು ಮೆಟ್ಟಿಲನ್ನು ಹಾನಿಗೊಳಿಸಲಾಗಿದೆ. ಕಲ್ಲು ಎತ್ತಿಹಾಕಿ ಮೆಟ್ಟಿಲು ಹಾನಿಗೊಳಿಸಿರುವುದಾಗಿ ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!