Saturday, May 18, 2024
spot_imgspot_img
spot_imgspot_img

ನೆಲ್ಯಾಡಿ: ಗುಂಡ್ಯದ ಗುಡ್ಡದಲ್ಲಿ ಅನ್ಯಕೋಮಿನ ಜೋಡಿ ಪತ್ತೆ ಪ್ರಕರಣ; ಕೆಲ ಹಿಂದೂ ಯುವಕರ ವಿರುದ್ಧ ದೂರು ದಾಖಲಿಸಿದ ನಜೀರ್; ನಾನು ಆಕೆಯನ್ನು ಪ್ರೀತಿಸುತ್ತಿದ್ದೆ ಎಂದು ದೂರಿನಲ್ಲಿ ಉಲ್ಲೇಖ..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಹಿಂದೂ ಯುವತಿ ಮತ್ತು ಅನ್ಯಕೋಮಿನ ಯುವಕನ ಜೋಡಿಯನ್ನು ಗುಂಡ್ಯ ಸಮೀಪ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಯುವಕ ಕೆಲವರ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.

ಸುರೇಂದ್ರ, ತೀರ್ಥ ಪ್ರಸಾದ್, ಜಿತೇಶ್ ಹಾಗೂ ಇತರರ ವಿರುದ್ಧ ನಜೀರ್ ಠಾಣೆಗೆ ದೂರು ನೀಡಿದ್ದಾನೆ.

vtv vitla
vtv vitla

ಆಟೋರಿಕ್ಷಾದಲ್ಲಿ ತಾನು ಪ್ರೀತಿ ಮಾಡುತ್ತಿದ್ದ ಹುಡುಗಿಯನ್ನು ಕುಳ್ಳಿರಿಸಿಕೊಂಡು ಉಪ್ಪಿನಂಗಡಿಯಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಗುಂಡ್ಯಕ್ಕೆ ಬಂದು ಗುಂಡ್ಯದಿಂದ ಸುಬ್ರಹ್ಮಣ್ಯ ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗುತ್ತ ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿಗೆ ತಲುಪುವಾಗ ಸುರೇಂದ್ರ, ತೀರ್ಥಪ್ರಸಾದ್‌ ಜಿತೇಶ್‌ ಮತ್ತು ಇತರರು ಆಟೋರಿಕ್ಷಾವನ್ನು ತಡೆದು ನಿಲ್ಲಿಸಿ “ ನೀವು ಎಲ್ಲಿಗೆ ಹೋಗುತ್ತಿದ್ದೀರಿ ? ನಿಮ್ಮ ಹೆಸರೇನು ಎಂದು ಹೇಳಿದಾಗ ತಮ್ಮ ಹೆಸರನ್ನು ಹೇಳಿದಾಗ ಆರೋಪಿತರು ಅವಾಚ್ಯ ಶಬ್ದದಿಂದ ಬೈದು, ಹಲ್ಲೆ ನಡೆಸಿದ್ದು, ಅಷ್ಟೇ ಅಲ್ಲದೇ ಜೊತೆಗಿದ್ದ ಯುವತಿಗೂ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿದ್ದಾನೆ.

ಈ ಬಗ್ಗೆ ಠಾಣೆಯಲ್ಲಿ ಅ.ಕ್ರ 47/2022 ಕಲಂ:143 147 341 504 323 324 506 153(a) R/W. 149 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!