Tuesday, July 1, 2025
spot_imgspot_img
spot_imgspot_img

ನೆಲ್ಯಾಡಿ: ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ..!

- Advertisement -
- Advertisement -

ನೆಲ್ಯಾಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸಹ ಪ್ರಯಾಣಿಕರ ಸಹಕಾರದಿಂದ ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ನೆಲ್ಯಾಡಿಯಿಂದ ಹತ್ತಿದ್ದ ವಿದ್ಯಾರ್ಥಿನಿಗೆ ಪೆರ್ನೆ ಗ್ರಾಮದ ನಿವಾಸಿ ಅಶ್ರಫ್ (45) ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ತನ್ನ ದೇಹದ ಖಾಸಗಿ ಭಾಗಗಳನ್ನು ಸ್ಪರ್ಶಿಸುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿದ್ದ.

ಇದರಿಂದ ಭೀತಳಾದ ವಿದ್ಯಾರ್ಥಿನಿ ಕಂಡೆಕ್ಟರ್ ಬಳಿ ದೂರು ನೀಡಿದ್ದಾಳೆ. ಕಂಡೆಕ್ಟರ್ ಹಾಗೂ ಸಹ ಪ್ರಯಾಣಿಕರು ಆರೋಪಿಯನ್ನು ಅಶ್ರಫ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಶ್ರಫ್ ಈಗಾಗಲೇ ಮೂರು ಮಕ್ಕಳ ತಂದೆಯಾಗಿದ್ದು ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದಾನೆ. ಬಸ್ಸಿನಲ್ಲಿ ಪ್ರಯಾಣಿಕ ಹಿಡಿತದಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಸ್ಸಿನ ಸಿಬ್ಬಂದಿ ನೇರವಾಗಿ ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ ಕಾರಣ ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಲು ಸಾಧ್ಯವಾಯಿತು.

ಕಲಿಕಾ ಪ್ರಕ್ರಿಯೆಗೆ ಅಡಚಣೆಯಾಗುವ ಭೀತಿಯಿಂದ ವಿದ್ಯಾರ್ಥಿನಿ ದೂರು ನೀಡಲು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!