Thursday, March 28, 2024
spot_imgspot_img
spot_imgspot_img

ನೆಲ್ಯಾಡಿ: ಸಹಕಾರ ಸಂಘವೊಂದರ ಪಿಗ್ಮಿ ಸಂಗ್ರಾಹಕ ನಾಪತ್ತೆ.. !

- Advertisement -G L Acharya panikkar
- Advertisement -
suvarna gold

ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ವ್ಯಕ್ತಿಯೋರ್ವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದು, ಇವರು ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

ನಾಪತ್ತೆಯಾದ ವ್ಯಕ್ತಿ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26)ಎನ್ನಲಾಗಿದೆ.

ಈ ಮಧ್ಯೆ ಜ.18ರಂದು ಮಧ್ಯಾಹ್ನದ ವೇಳೆಗೆ ಪತ್ರಿಕೆಯೊಂದರ ವರದಿಗಾರರಿಗೆ ವಾಟ್ಸಪ್ ಕರೆ ಮಾಡಿರುವ ಪ್ರವೀಣ್ ಕುಮಾರ್, ನಾನು ಬಿಹಾರದಲ್ಲಿದ್ದು ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ.

vtv vitla

ಪ್ರವೀಣ್‌ಕುಮಾರ್‌ರವರು ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ನೆಲ್ಯಾಡಿಯಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದು ಚಿರಪರಿಚಿತರಾಗಿದ್ದರು.

ಇಲ್ಲಿನ ಅಡಿಕೆ ವ್ಯಾಪಾರಿಗಳು, ನೆಲ್ಯಾಡಿಯ ಪ್ರತಿಷ್ಠಿತ ಉದ್ಯಮಿಗಳು ಸೇರಿದಂತೆ ಹಲವು ಮಂದಿಯ ವಿಶ್ವಾಸಗಳಿಸಿಕೊಂಡಿದ್ದ ಅವರು ಕೆಲವರಿಂದ ಲಕ್ಷಕ್ಕೂ ಮಿಕ್ಕಿ ಕೈ ಸಾಲ ಪಡೆದುಕೊಂಡು ಹಿಂತಿರುಗಿಸಲಾಗದೆ ಈಗ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

vtv vitla
vtv vitla

ಅಲ್ಲದೇ ಚಿಟ್‌ಫಂಡ್‌ನಲ್ಲೂ ಇವರಿಂದ ಕೆಲವರಿಗೆ ಮೋಸ ಆಗಿದೆ ಎಂಬ ದೂರುಗಳು ಕೇಳಿಬಂದಿವೆ. ಇವರು ಹಲವು ಮಂದಿಯಿಂದ ರೂ.55ಲಕ್ಷಕ್ಕೂ ಹೆಚ್ಚು ಕೈ ಸಾಲ ಮಾಡಿದ್ದರು ಎಂದು ಹೇಳಲಾಗಿದೆ.

ಪ್ರವೀಣ್‌ ಕುಮಾರ್‌ರವರು ಜ.3ರಿಂದ ನಾಪತ್ತೆಯಾಗಿದ್ದು ಅವರ ಮೊಬೈಲ್ ಈಗ ಸ್ವಿಚ್ ಆಫ್ ಆಗಿದೆ. ಪ್ರವೀಣ್ ನೆಲ್ಯಾಡಿ ವರ್ತಕ ಸಂಘದ ಕಾರ್ಯದರ್ಶಿಯೂ ಆಗಿದ್ದರು. ಮನೆಯವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!