Sunday, June 29, 2025
spot_imgspot_img
spot_imgspot_img

ನೆಲ್ಯಾಡಿ: ಸೆಲ್ಫೀ ವಿಡಿಯೋ ಮಾಡುತ್ತಿದ್ದ ವೇಳೆ ಯುವಕನೋರ್ವ ಹೊಳೆಯಲ್ಲಿ ಮುಳುಗಿ ಕಣ್ಮರೆ..!

- Advertisement -
- Advertisement -

ನೆಲ್ಯಾಡಿ: ಸೆಲ್ಫಿ ವಿಡಿಯೋ ಮಾಡುತ್ತಿರುವ ವೇಳೆ ಯುವಕನೊಬ್ಬ ಗುಂಡ್ಯ ಹೊಳೆಯಲ್ಲಿ ಮುಳುಗಿ ಕಣ್ಮರೆಯಾಗಿದ ಘಟನೆ ನ.10 ರಂದು ನಡೆದಿದೆ.

ರಾಜಸ್ಥಾನ ಮೂಲದ ಸೀತಾರಾಮ್​ ನೀರಿನಲ್ಲಿ ಮುಳುಗಿ ಕಣ್ಮರೆಯದ ಯುವಕ.

ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂಡ್ಯ ಹೊಳೆಗೆ ಇಳಿದಿದ್ದಾರೆ. ಒಬ್ಬ ನೀರಿನಲ್ಲಿ ಆಟವಾಡುತ್ತಾ ಬಂಡೆಯ ಮೇಲೆ ನಿಂತಿದ್ದು, ಇನ್ನೊಬ್ಬ ಮೊಬೈಲ್​ನಲ್ಲಿ ದೃಶ್ಯವನ್ನು ಚಿತ್ರೀಕರಿಸುತ್ತಾ ಅವನ ಪಕ್ಕ ಬಂದಿದ್ದಾನೆ ಎನ್ನಲಾಗಿದೆ.

ಈ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿರುವಾಗ ಯುವಕನೊಬ್ಬ ಆಯತಪ್ಪಿ ನೀರಿಗೆ ಬದ್ದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ವಿಷಯ ತಿಳಿದ ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ಪತ್ತೆಗಾಗಿ ನದಿಯಲ್ಲಿ ಹುಡುಕಾಟ ನಡೆಸಿದರೂ ಯುವಕ ಪತ್ತೆಯಾಗಿಲ್ಲ. ಕತ್ತಲು ಆವರಿಸಿರುವ ಹಿನ್ನೆಲೆಯಲ್ಲಿ ಮತ್ತು ಈ ಸ್ಥಳ ಅತ್ಯಂತ ಅಪಾಯಕಾರಿ ಆಗಿರುವ ಕಾರಣದಿಂದಾಗಿ ಹುಡುಕಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಗುರುವಾರ ಮತ್ತೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಉಪ್ಪಿನಂಗಡಿ ಠಾಣಾಥಿಕಾರಿ ಕುಮಾರ್ ಕಾಂಬ್ಲೇ ನೇತೃತ್ವದ ಪೊಲೀಸರ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

- Advertisement -

Related news

error: Content is protected !!