Sunday, May 5, 2024
spot_imgspot_img
spot_imgspot_img

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ; ಆತ್ಮಹತ್ಯೆ ಅಲ್ಲ, ಕೊಲೆಯೆಂದು ಪೋಷಕರ ಆರೋಪ

- Advertisement -G L Acharya panikkar
- Advertisement -
vtv vitla

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾದ ಘಟನೆ ಮಂಡ್ಯ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ನಡೆದಿದೆ.

ಹನಕೆರೆ ಗ್ರಾಮದ ರಮ್ಯ (24) ಮೃತ ದುರ್ದೈವಿ. ರಮ್ಯಾ ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್ ಎಂಬಾತನೊಂದಿಗೆ ವಿವಾಹ ಆಗಿದ್ದರು.

ಮದುವೆ ಸಮಯದಲ್ಲಿ ಒಂದು ಲಕ್ಷ ನಗದು ಹಾಗೂ 150 ಗ್ರಾಂ ಚಿನ್ನಾಭರಣವನ್ನು ವರದಕ್ಷಿಣೆ ಆಗಿ ಕುಮಾರ್‌ ಪಡೆದಿದ್ದು, ಹೆಚ್ಚಿನ ವರದಕ್ಷಿಣೆ ತರುವಂತೆ ರಮ್ಯಾಗೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆಕೆಯನ್ನು ಪತಿ ಹಾಗೂ ಅತ್ತೆ ಪುಟ್ಟಗೌರಮ್ಮ, ಸಹೋದರಿಯರು ಸೇರಿ ಕೊಲೆ ಮಾಡಿ ಬಳಿಕ ನೇಣಿಗೆ ಹಾಕಿದ್ದಾರೆ ಎಂದು ರಮ್ಯಾಳ ಪೋಷಕರು ಆರೋಪಿಸಿದ್ದಾರೆ. ರಮ್ಯಾಳ ಪತಿ, ಅತ್ತೆ ಸೇರಿ 6 ಜನರ ವಿರುದ್ಧ ಹಲಗೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್ 302, 304 ಹಾಗೂ ವರದಕ್ಷಿಣೆ ಕಿರುಕುಳ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!