Saturday, April 27, 2024
spot_imgspot_img
spot_imgspot_img

ಪಂಚಾಯತ್ ಕಚೇರಿಯಲ್ಲಿ ಯುವತಿಗೆ ಬೆಂಕಿ ಹಚ್ಚಿ, ತಾನೂ ಆತ್ಮಹತ್ಯೆಗೆ ಶರಣಾದ ಯುವಕ!

- Advertisement -G L Acharya panikkar
- Advertisement -

vtv vitla
vtv vitla

ಕೋಯಿಕ್ಕೋಡ್: ಪಂಚಾಯತ್ ಕಚೇರಿಯಲ್ಲಿ ಉದ್ಯೋಗದಲ್ಲಿದ್ದ ಯುವತಿಗೆ ಬೆಂಕಿ ಹಚ್ಚಿ, ತಾನು ಕೂಡ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೋಯಿಕ್ಕೋಡ್​ನಲ್ಲಿ ನಡೆದಿದೆ.

ಕೊಲೆಯಾದ ಯುವತಿ ಕೃಷ್ಣಪ್ರಿಯಾ (22) ಎಂದು ಗುರುತಿಸಲಾಗಿದೆ. ಥಿಕ್ಕೋಡಿ ನಿವಾಸಿ ನಂದನ್​ ಕುಮಾರ್​ ಎಂಬಾತ (26) ಯುವತಿಗೆ ಬೆಂಕಿ ಇಟ್ಟು ತಾನು ಕೂಡ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾನೆ.

vtv vitla

8 ದಿನಗಳ ಹಿಂದೆಯಷ್ಟೇ ಕೃಷ್ಣಪ್ರಿಯಾ, ಪಂಚಾಯತ್​ ಕಚೇರಿಯಲ್ಲಿ ಯೋಜನಾ ಸಹಾಯಕಿ ಹುದ್ದೆಗೆ ಸೇರಿದ್ದರು. ನಂದನ್​ಕುಮಾರ್​ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಪಂಚಾಯತ್​ ಕಚೇರಿಯ ಮುಂದೆಯೇ ಕೃಷ್ಣಪ್ರಿಯಾಗೆ ನಂದನ್​ ಬೆಂಕಿ ಹಚ್ಚಿದ್ದ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇಬ್ಬರನ್ನು ಕೂಡ ಆಸ್ಪತ್ರೆಗೆ ಸಾಗಿಸಲಾಗಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯಿಂದ ಮದುವೆ ಪ್ರಸ್ತಾಪದ ತಿರಸ್ಕಾರವೇ ಕಾರಣ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

vtv vitla
vtv vitla
- Advertisement -

Related news

error: Content is protected !!