- Advertisement -
- Advertisement -
ಪಂಜಾಬ್ ನಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ದೋಷ ವಿಚಾರ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಇದೀಗ ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ ಪ್ರಧಾನಿ ಮೋದಿ ಬಳಿ ಕ್ಷಮೆಯಾಚಿಸಿದ್ದಾರೆ.
ಫಿರೋಜ್ ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಪ್ರಧಾನಿ ಅವರ ಬೆಂಗಾವಲು ಪಡೆ ಫ್ಲೈಓವರ್ ನಲ್ಲಿ ಸಿಲುಕಿಕೊಂಡಿತ್ತು, ನಂತರ ಅವರು ರ್ಯಾಲಿ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಪಂಜಾಬ್ ನಿಂದ ಮರಳಿದ್ದರು.
ಈ ವಿಚಾರ ದೇಶದಲ್ಲಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಘಟನೆ ಕುರಿತು ಪ್ರಧಾನಿ ಮೋದಿ ಬಳಿ ಪಂಜಾಬ್ ಸಿಎಂ ಪರಂಜಿತ್ ಚನ್ನಿ ಕ್ಷಮೆಯಾಚಿಸಿದ್ದಾರೆ. ಪಂಜಾಬ್ ನಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ದೋಷದ ಬಗ್ಗೆ ದೇಶದಲ್ಲಿ ಭಾರೀ ಅಕ್ರೋಶ ವ್ಯಕ್ತವಾಗಿದ್ದು, ಪಂಜಾಬ್ ಸರ್ಕಾರದ ನಡೆಗೆ ಕೇಂದ್ರ ಸರ್ಕಾರ ಗರಂ ಆಗಿತ್ತು.
- Advertisement -