Tuesday, May 14, 2024
spot_imgspot_img
spot_imgspot_img

ಪಡುಬಿದ್ರಿ: ಇಬ್ಬರೂ ವಿಷ ಸೇವಿಸಿ ಸಾಯೋಣವೆಂದು ಪತ್ನಿಗೆ ವಿಷವಿಕ್ಕಿ ಕೊಲೆ.!?

- Advertisement -G L Acharya panikkar
- Advertisement -
astr

ಪಡುಬಿದ್ರಿ: ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕವಾಡಿ ಕೊಲೆ ಮಾಡಿದ ಘಟನೆ ಜನರನ್ನ ಬೆಚ್ಚಿಬೀಳುವಂತೆ ಮಾಡಿದೆ. ಆತನ ಪ್ಲ್ಯಾನ್ ಹೇಗಿತ್ತು ಗೋತ್ತಾ.?

ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಬಳಿಕ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕವಾಡಿ ಕೊಲೆ ಪತಿ ಹಾಗೂ ಆತನ ಮನೆಯವರ ವಿರುದ್ಧ ಮೃತ ಮಹಿಳೆಯ ಅಕ್ಕ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೃತರನ್ನು ಪೈಯಾರ್ ರಸ್ತೆ ನಿವಾಸಿ ವಿದ್ಯಾ(29) ಎನ್ನಲಾಗಿದೆ.

ವಿದ್ಯಾ ಅವರು ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಯತಿನ್ ರಾಜ್ ಎಂಬಾತನನ್ನು ಪ್ರೀತಿಸಿ 2017 ರ ಫೆ .28 ರಂದು ವಿವಾಹವಾಗಿದ್ದರು. ಗಂಡನ ಮನೆಯಲ್ಲಿ ಗಂಡ ಯತಿನ್ ರಾಜ್, ಮಾವ ರಾಘು, ಅತ್ತೆ ಗೀತಾ ಮತ್ತು ಮೈದುನ ಯಕ್ಷಿತ್ ಎಂಬವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಹಾಗೂ ಯತಿನ್ ರಾಜ್ ನು ಸರಿಯಾಗಿ ಕೆಲಸ ಮಾಡದೇ ವಿದ್ಯಾಳಿಂದ ಹಲವು ಬ್ಯಾಂಕ್, ಸೊಸೈಟಿ ಸಂಘ, ಸಂಸ್ಥೆಗಳಿಂದ ಸಾಲ ತೆಗೆಸಿ ಅದನ್ನು ಖರ್ಚು ಮಾಡುತ್ತಿದ್ದ ಎಂದು ದೂರಲಾಗಿದೆ. ಇದಲ್ಲದೇ ವಿದ್ಯಾ ಅವರ ತಂದೆ ಕೊಟ್ಟ ಹಣವನ್ನೂ ಖರ್ಚು ಮಾಡಿ, ಚಿನ್ನವನ್ನು ಮಾರಾಟ ಮಾಡಿ ಖರ್ಚು ಮಾಡಿದ್ದಾನೆ. ಇದರ ಜೊತೆಗೆ ಇನ್ನೂ ಹೆಚ್ಚಿನ ಸಾಲ ತೆಗೆದುಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಾ ವರದಕ್ಷಿಣೆಗಾಗಿ ದೈಹಿಕ ಹಿಂಸೆ ನೀಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗಂಡನ ಮನೆಯವರ ಕಿರುಕುಳವು ಹೆಚ್ಚಾಗಿ ಅದನ್ನು ತಡೆಯಲಾರದೆ ಯತಿನ್‌ರಾಜ್‌ ಜತೆ ಮನೆಯಿಂದ ಹೊರಬಂದು ಕಳೆದೆರಡು ತಿಂಗಳ ಹಿಂದೆ ಉಚ್ಚಿಲದಲ್ಲಿ ಹಾಗೂ ಕಳೆದೊಂದು ತಿಂಗಳುಗಳಿಂದ ಕಾಪು ಲೈಟ್‌ಹೌಸ್‌ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲೂ ಆರೋಪಿ ಗಂಡನ ಕಿರುಕುಳ ತಪ್ಪಿರಲಿಲ್ಲ. ಇನ್ನು ಮುಂದಕ್ಕೆ ಸಾಲ ಮಾಡಿಕೊಡುವುದಿಲ್ಲ ಎಂದು ವಿದ್ಯಾ ಹೇಳಿದ್ದರಿಂದ ವಿದ್ಯಾರನ್ನು ಕೊಂದರೆ ಅವರಿಂದ ಮಾಡಿಸಿದ ಸಾಲ ತೀರುತ್ತದೆ ಎಂಬ ಕಾರಣಕ್ಕೆ ಆತ ಯೋಜನೆ ರೂಪಿಸಿ ಇಬ್ಬರೂ ವಿಷ ಸೇವಿಸಿ ಸಾಯೋಣವೆಂದು ಪತ್ನಿಯನ್ನು ನಂಬಿಸಿ, ಅವಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಷ ಕುಡಿಸಿ, ಬಳಿಕ ತನ್ನ ಮೇಲೆ ಅನುಮಾನ ಬರಬಾರದೆಂದು ತಾನೂ ಸ್ವಲ್ಪ ಪ್ರಮಾಣದಲ್ಲಿ ವಿಷ ಸೇವಿಸಿ ನಾಟಕಮಾಡಿದ್ದಾನೆ. ಈ ಕುರಿತು ಪಡುಬಿದ್ರಿ ಪೊಲೀಸರಿಗೆ ವಿದ್ಯಾಳ ಅಕ್ಕ ಲೀಲಾವತಿ ತಿಳಿಸಿದ್ದಾರೆ.

- Advertisement -

Related news

error: Content is protected !!