- Advertisement -
- Advertisement -
ಪಡುಬಿದ್ರೆ: ಕರಾವಳಿಯಲ್ಲಿ ಒಂದಲ್ಲೊಂದು ಕಡೆ ಗೋವುಗಳ ಅಕ್ರಮ ಸಾಗಾಟ ನಡೆಯುತ್ತಿರುವುದು ಗೊತ್ತೇ ಇದೆ. ಇದಕ್ಕೆ ಪ್ರತಿರೋಧವಾಗಿ ಬಜರಂಗದಳದ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿದ ಘಟನೆ ನಡೆದಿದೆ.
ಪಡುಬಿದ್ರೆಯಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದಾಗ ಭಜರಂಗದಳ ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಿಸಿ ಗೋವುಗಳನ್ನು ರಕ್ಷಿಸಿದ್ದಾರೆ.
ಲಾರಿಯಲ್ಲಿ ಇಪ್ಪತೈದಕ್ಕೂ ಮಿಕ್ಕಿದ ಜಾನುವಾರುಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದರು. ಸದ್ಯ ಗೋವುಗಳನ್ನು ರಕ್ಷಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -