- Advertisement -
- Advertisement -
ಪಡುಬಿದ್ರೆ: ಅಮಲು ಪದಾರ್ಥ ಸೇವಿಸಿ ರಸ್ತೆ ಮಧ್ಯೆ ವಿಧ್ಯಾರ್ಥಿಗಳು ಹೊಡೆದಾಟಕ್ಕೆ ಇಳಿದ ಘಟನೆ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ.
ಚೆನ್ನೈನ ಖಾಸಗಿ ಕಾಲೇಜೊಂದರಲ್ಲಿ ಎಂಬಿಬಿಎಸ್ ಕಲಿಯುತ್ತಿರುವ ವಿಧ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಸ್ಕೂಟರ್ ನಲ್ಲಿ ಓರ್ವ ಹುಡುಗಿ ಹಾಗೂ ಇಬ್ಬರು ಹುಡುಗರು ಪ್ರಯಾಣಿಸುತ್ತಿದ್ದರು. ಮಾರ್ಗ ಮಧ್ಯೆ ಪೆಟ್ರೋಲ್ ಖಾಲಿಯಾಗಿದ್ದ ವಿಚಾರಕ್ಕೆ ಮೂವರು ರಸ್ತೆ ಮಧ್ಯೆ ಗಲಾಟೆಗೆ ನಿಂತಿದ್ದಾರೆ.
ಅಮಲು ಪದಾರ್ಥ ಸೇವಿಸಿರುವ ವಿದ್ಯಾರ್ಥಿಗಳ ಬೀದಿ ರಂಪಾಟ ಹೆಚ್ಚಾದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದಾಗ ಪೊಲೀಸರಿಗೆ ನಮ್ಮನ್ನ ಮುಟ್ಟಿದರೆ ಪರಿಣಾಮ ಚೆನ್ನಾಗಿರೋಲ್ಲ ಅಂತ ವಿಧ್ಯಾರ್ಥಿಗಳು ಅವಾಜ್ ಹಾಕಿದ್ದಾರೆ. ಕೊನೆಗೆ ಸಾರ್ವಜನಿಕರ ಸಹಾಯದಿಂದ ವಿಧ್ಯಾರ್ಥಿಗಳನ್ನು ಅಂಬುಲೆನ್ಸ್ ಗೆ ತುಂಬಿ ಆಸ್ಪತ್ರೆಗೆ ದಾಖಲಿಸಿದರು.
- Advertisement -