- Advertisement -
- Advertisement -
ಪಡುಬಿದ್ರೆ: ಪಡುಬಿದ್ರೆ ಸಮುದ್ರದಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ರಘುರಾಮ ದೇವಾಡಿಗ ಅವರ ಪುತ್ರ ಧನುಷ್ (19) ಎನ್ನಲಾಗಿದೆ.
ಈತನು ತನ್ನಿಬ್ಬರು ಗೆಳೆಯರೊಂದಿಗೆ ಕಡಲಿಗೆ ಈಜಲು ಹೋಗಿ ಫೆ. 19ರಂದು ಸಮುದ್ರದಲ್ಲಿ ನಾಪತ್ತೆಯಾಗಿದ್ದು, ಆ ಬಳಿಕ ಮೃತದೇಹಕ್ಕೆ ಶೋಧ ನಡೆದಿತ್ತು. ನಿನ್ನೆ ಸಂಜೆ ಪಡುಬಿದ್ರಿ ಕಾಡಿಪಟ್ಲ ಸಮುದ್ರ ಕಿನಾರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಆತನೊಂದಿಗೆ ಈಜಲು ಹೋಗಿದ್ದ ಇಬ್ಬರನ್ನು ಸ್ಥಳೀಯರು ರಕ್ಷಣೆಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -