ಹಾಸನ: ಪತ್ನಿಯೇ ಪತಿಯನ್ನ ಬರ್ಬರವಾಗಿ ಕೊಂದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆಯ ಹಿಂದೆ ಗುಂಡಿಯೊಂದನ್ನು ತೆಗೆದು ಹೂತಿದ್ದಾಳೆ. ನಂತರ ಏನು ಗೊತ್ತಿಲ್ಲದಂತೆ ನಾಟಕ ಮಾಡುತ್ತ ತನ್ನಪಾಡಿಗೆ ತಾನಿದ್ದ ಪತ್ನಿಯನ್ನ ಪೊಲೀಸರು ವಿಚಾರಣೆಗೊಳಪಡಿಸಿ ಬಂಧಿಸಿದ್ದಾರೆ.
ಗ್ರಾಮದ ಕೃಷ್ಣೇಗೌಡ ಲೀಲಾವತಿ 25 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದರೆ. ಮಗ ಬೆಂಗಳೂರಿನಲ್ಲಿ ಚಾಲಕನಾಗಿದ್ದಾನೆ. ಮನೆಯಲ್ಲಿ ಇಬ್ಬರೇ ಇರ್ತಿದ್ದ ಈ ದಂಪತಿ ನಿತ್ಯ ಜಗಳಮಾಡಿಕೊಳ್ತಿದ್ದರಂತೆ, ಕೃಷ್ಣೆಗೌಡ ಮೊದಲಿನಿಂದಲೂ ಕುಡಿದು ಬಂದು ಗಲಾಟೆ ಮಾಡುವುದು. ಪತ್ನಿಯನ್ನ ಹಿಡಿದು ಹಲ್ಲೆ ಮಾಡುತ್ತಿದ್ದ. ಇದರಿಂದ ರೋಸಿ ಹೋಗಿದ್ದ ಲೀಲಾವತಿ ಕೂಡ ಹಲವು ಬಾರಿ ತವರು ಮನೆಯವರಿಗೆ ಹೇಳಿದ್ದಳು. ಬಳಿಕ ಇಬ್ಬರ ಮಧ್ಯೆ ರಾಜಿ ಪಂಚಾಯಿತಿ ಮಾಡಿದ್ದರು.
ಆದರೆ, ತನ್ನ ನಡವಳಿಕೆಯಲ್ಲಿ ಕೃಷ್ಣೆಗೌಡ ಮಾತ್ರ ಬದಲಾವಣೆ ಕೊಂಡಿರಲಿಲ್ಲ, ಅಕ್ಟೋಬರ್ 17ರ ಸೋಮವಾರ ಕೂಡ ರಾತ್ರಿ ಕೃಷ್ಣೆಗೌಡ ಕುಡಿದು ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ತನ್ನ ಮೇಲೆ ಹಲ್ಲೆ ಮಾಡಲು ಬಂದ ಪತಿಗೆ ಲೀಲಾವತಿ ಹೊಡೆದಿದ್ದಾಳೆ. ಏಟು ಬೀಳುತ್ತಿದ್ದಂತೆಯೇ ಕೃಷ್ಣೆಗೌಡ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಗಂಡ ಮೃತಪಟ್ಟ ಬಳಿಕ ವಿಚಾರವನ್ನೇ ಮುಚ್ಚಿ ಹಾಕಬೇಕು ಎನ್ನುವ ಉದ್ದೇಶದಿಂದ ಮೃತದೇಹದ ಕೈ ಕಾಲುಗಳನ್ನು ಕಡಿದ ಪತ್ನಿ, ಮೃತ ದೇಹವನ್ನು ಮನೆಯ ಹಿಂಭಾಗ ಗುಂಡಿ ತೆಗೆದು ಹೂತಿದ್ದಾಳೆ. ಮರು ದಿನ ಏನೂ ಆಗೇ ಇಲ್ಲಾ ಅನ್ನುವ ರೀತಿಯಲ್ಲಿ ಸುಮ್ಮನಿದ್ದಳು. ಆದರೆ ಊರ ಜನರು ರಾತ್ರಿ ಮನೆಯಲ್ಲಿ ಜಗಳ ಮಾಡುತ್ತಿದ್ದ ಕೃಷ್ಣೇಗೌಡ ಮರುದಿನ ಕಾಣುತ್ತಿಲ್ಲ, ಎರಡು ದಿನವಾದರು ಎಲ್ಲಿ ಹೋದ ಎಂದು ಅವರ ಸಹೋದರ ಹಾಗೂ ಸಂಬಂಧಿಕರ ಬಳಿ ವಿಚಾರಿಸಿದ್ದಾರೆ.
ಮೃತನ ಸಹೋದರ ಸ್ವಾಮಿಗೌಡ ಅರಕಲಗೂಡು ಪೊಲೀಸರಿಗೆ ನೀಡಿದ ದೂರಿನ ಮೇಲೆ ಲೀಲಾವತಿಯನ್ನ ಕರೆತಂದು ವಿಚಾರ ಮಾಡಿದಾಗ ಹತ್ಯೆ ಪ್ರಕರಣ ಬಯಲಾಗಿದೆ. ಪೊಲೀಸರು ಲೀಲಾವತಿಯನ್ನ ಕರೆತಂದು ವಿಚಾರಣೆ ಮಾಡಿದಾಗ ನಡೆದಿರುವ ಹತ್ಯೆ ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನ ವಶಕ್ಕೆ ಪಡೆದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ನಡುವೆ ಮನೆಗೆ ಯಾರೋ ಒಬ್ಬ ಬಂದು ಹೋಗುತ್ತಿದ್ದ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಕಲಹ ಇದೀಗ ಒಂದು ಕೊಲೆಯಲ್ಲಿ ಅಂತ್ಯವಾಗಿದೆ, ತಾಯಿ ಮಾಡಿರೋ ಕೃತ್ಯದಿಂದ ಕಂಗಾಲಾಗಿರೋ ಮಕ್ಕಳು ಕಣ್ಣೀರಿಡುತ್ತಿದ್ದಾರೆ. ನಾವೆಲ್ಲಾ ನಮ್ಮ ಪಾಡಿಗೆ ಬದುಕು ಕಟ್ಟಿಕೊಂಡಿರುವಾಗ ಮನೆಯಲ್ಲಿದ್ದ ಅಪ್ಪ ಅಪ್ಪ ಹೀಗೆಲ್ಲಾ ಅನಾಹುತ ಮಾಡಿಕೊಂಡಿದ್ದಾರೆ ಎಂದು ರೋದಿಸುತ್ತಿದ್ದಾರೆ.