- Advertisement -
- Advertisement -
ಚಿಕ್ಕಮಗಳೂರು: ವಿಷ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನನೊಂದು ಪತ್ನಿಯೂ ಸಾವಿಗೆ ಶರಣಾದ ಘಟನೆ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿಯಲ್ಲಿ ನಡೆದಿದೆ.
ಪತಿಯ ಆತ್ಮಹತ್ಯೆಯ ನಂತರ ಪತ್ನಿಯ ವಿರುದ್ಧ ಪೊಲೀಸರಿಗೆ ಅನೈತಿಕ ಸಂಬಂಧದಿಂದ ಪತಿಯ ಕೊಲೆ ಎಂದು ದೂರು ನೀಡಲಾಗಿತ್ತು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಪತ್ನಿ ನೇಣಿಗೆ ಶರಣಾಗಿದ್ದಾರೆ.
ಜಗದೀಶ್ (34) ಎರಡು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜಗದೀಶ್ ಆತ್ಮಹತ್ಯೆಗೆ ಪತ್ನಿ ನೇತ್ರಾವತಿ ಕಾರಣ ಎಂದು ಕುಟುಂಬಸ್ಥರರು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಭಾನುವಾರ ಮನೆಯಿಂದ ನಾಪತ್ತೆಯಾಗಿದ್ದ ನೇತ್ರಾವತಿ ಸಮೀಪದ ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾರಿಕೊಂಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -