

ಬೆಂಗಳೂರು: ಪ್ರೊ. ಕೆಎಸ್ ಭಗವಾನ್ ರವರ ಮೇಲೆ ಉಪ್ಪಿನಂಗಡಿಯಲ್ಲಿ ಪತ್ರಕರ್ತ ಶ್ಯಾಮ ಸುದರ್ಶನ್ ಹೊಸಮೂಲೆ ನೀಡಿರುವ ದೂರಿನ ಆಧಾರದಲ್ಲಿ ದಾಖಲಾಗಿರುವ ಪ್ರಕರಣ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ವರ್ಗಾವಣೆಯಾಗಿ ತನಿಖೆ ನಡೆದು ಪೋಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಭಗವಾನ್ ಸೇರಿದಂತೆ ಮೂವರನ್ನು ಆರೋಪಿತರನ್ನಾಗಿ ಹೆಸರಿಸಲಾಗಿದೆ. ಪ್ರೋ
ಕೆ.ಎಸ್. ಭಗವಾನ್ ಮೊದಲ ಆರೋಪಿಯಾದರೆ, ಸಾಹಿತಿ ಚಂಪಾ ( ಚಂದ್ರಶೇಖರ್ ಪಾಟೀಲ್ ) ರನ್ನು ಎರಡನೇ ಆರೋಪಿಯಾಗಿ ಹೆಸರಿಸಲಾಗಿದೆ ಹಾಗೂ ಸೆಲ್ವಿಯನ್ನು ಮೂರನೇ ಆರೋಪಿಯನ್ನಾಗಿ ಮಾಡಲಾಗಿದೆ.

ಹಿಂದೂಗಳ ಪ್ರವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತದ ಬಗ್ಗೆ ತುಚ್ಛವಾಗಿ ಮಾತಾಡಿದ್ದಲ್ಲದೆ, ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೋಮು ಭಾವನೆ ಕೆರಳಿಸಿದ್ದಾರೆ ಎಂದು ಆರೋಪಿಸಿ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತ ಶ್ಯಾಮ ಸುದರ್ಶನ್ ಭಟ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ 2015 ಸೆಪ್ಟೆಂಬರ್ 21 ರಂದು ದೂರು ನೀಡಿದ್ದರು.
‘ರಾಮಾಯಣದ ಶ್ರೀರಾಮ ತಂದೆಗೆ ಹುಟ್ಟಿದ ಮಗನಲ್ಲ, ಹಿಂದೂ ದೇವತೆಗಳು ವ್ಯಭಿಚಾರಿಗಳು, ಮಹಾಭಾರತ ಓದಬೇಡಿ, ಭಗವದ್ಗೀತೆ ಓದಿದವರು ಭಯೋತ್ಪಾದಕರಾಗುತ್ತಾರೆ, ಉಪನಿಷತ್ತು ಕೆಟ್ಟ ಗ್ರಂಥ, ಹಿಂದೂ ದೇವಸ್ಥಾನಗಳು ಕೇವಲ ಹಣ ಮಾಡುವ ಯಂತ್ರಗಳಾಗಿವೆ’ ಇತ್ಯಾದಿಯಾಗಿ ಕೆರಳಿಸುವಂಥ ಹೇಳಿಕೆ ನೀಡಿದ್ದಾರೆ ಎಂದು ಶ್ಯಾಮ ಸುದರ್ಶನ್ ಭಟ್ ಅವರು ಆರೋಪಿಸಿದ್ದರು.

ಇದೀಗ ಈ ಪ್ರಕರಣ ತನಿಖೆ ನಡೆದು ಬೆಂಗಳೂರಿನ ನ್ಯಾಯಾಲಯಕ್ಕೆ ಪೋಲೀಸರು ದೋಶಾರೋಪ ಪಟ್ಟಿ ದಾಖಲಿಸಿದ್ದಾರೆ. 295 (A) and 153 (A) 34 ಸೆಕ್ಷನ್ ಆಡಿಯಲ್ಲಿ ಪ್ರಕರಣ ದಾಖಲಾಗಿತ್ತು.

