ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥೆಯು ಕೊಡಮಾಡುವ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪತ್ರಕರ್ತ ಶ್ಯಾಮ ಸುದರ್ಶನ ಹೊಸಮೂಲೆ ಆಯ್ಕೆಯಾಗಿದ್ದಾರೆ. ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥೆಯು ಗಡಿನಾಡಿನ ಪ್ರದೇಶವಾದ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಕಲೆ ಮುಂತಾದವುಗಳ ಅಭಿವೃದ್ಧಿಗಾಗಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯು ಅವಿರತ ಶ್ರಮಿಸುತ್ತಿದೆ.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೇರಳದ ಎಲ್ಲಾ ಕನ್ನಡ ಪರ ಸಂಘಟನೆಗಳನ್ನು ಒಗ್ಗೂಡಿಸಿ ದಿನಾಂಕ 05-12-2021ನೇ ಭಾನುವಾರ ಬೆಳಿಗ್ಗೆ 10.00 ಗಂಟೆಯಿ0ದ ಕಾಸರಗೋಡು ಹೊಸ ಬಸ್ ನಿಲ್ದಾಣದ ಬಳಿಯ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ಗಡಿನಾಡು ಕನ್ನಡ ರಾಜ್ಯೋತ್ಸವ’ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಿದೆ. ಈ ವೇಳೆ ಕಹಳೆ ನ್ಯೂಸ್ನ ಪ್ರಧಾನ ಸಂಪಾದಕರಾಗಿರುವ ಶ್ಯಾಮ ಸುದರ್ಶನ ಹೊಸಮೂಲೆ ಅವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಈ ಸಮಾರಂಭದಲ್ಲಿ ಪ್ರತಿಷ್ಠಿತ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಹಲವು ಸಾಧಕರಿಗೆ ನೀಡಲಿದ್ದಾರೆ. ಕೇರಳ ಕರ್ನಾಟಕದ ಅನೇಕ ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿ ತಮಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.