Friday, May 17, 2024
spot_imgspot_img
spot_imgspot_img

ಪಾಣೆಮಂಗಳೂರು: ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

- Advertisement -G L Acharya panikkar
- Advertisement -

ಪಾಣೆಮಂಗಳೂರು: ಮಹಿಳೆಯೊಬ್ಬರು ಪಾಣೆಮಂಗಳೂರು ಗೂಡಿನ ಬಳಿಯ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.

ಆತ್ಮಹತ್ಯೆಗೈದ ಮಹಿಳೆಯನ್ನು ಬಂಟ್ವಾಳ ತ್ಯಾಗರಾಜನಗರದ ಸವಿತಾ ಭಟ್ (67) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ವೇಳೆಗೆ ಅವರು ಸೇತುವೆಯಿಂದ ನದಿಗೆ ಹಾರಿದ್ದು, ಕೂಡಲೇ ಸ್ಥಳೀಯ ಈಜುಪಟುಗಳು ಧಾವಿಸಿ ಅವರನ್ನು ರಕ್ಷಿಸಲು ಪ್ರಯತ್ನಪಟ್ಟರು. ಆದರೆ ಆ ವೇಳೆಗಾಗಗಲೇ ಮಹಿಳೆ ಮೃತಪಟ್ಟಿದ್ದರು. ಆತ್ಮಹತ್ಯೆಗೆ ಕಾರಣ ಏನೆಂದು ಗೊತ್ತಾಗಿಲ್ಲ.

ಮೃತ ಮಹಿಳೆ ಪತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!