- Advertisement -
- Advertisement -
ಸುಳ್ಯ: ಪಾವಗಡದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸುಳ್ಯದ ಯುವಕ ಬಲಿಯಾದ ಘಟನೆ ನಡೆದಿದೆ. ಕೇರ್ವಳ ನಿವಾಸಿ ಪ್ರಜ್ವಲ್ ಮೃತಪಟ್ಟ ದುರ್ದೈವಿ.
ಸುಳ್ಯ ರಿಕ್ಷಾ ಚಾಲಕರಾಗಿರುವ ರಮೇಶ್ ಅವರ ಪುತ್ರ ಪ್ರಜ್ವಲ್ ತುಮಕೂರು ಜಿಲ್ಲೆಯ ಪಾವಗಡದಲ್ಲಿ ಟೋಲ್ ಸೂಪರ್ವೈಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ಬೈಕ್ನಲ್ಲಿ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಲೆ ರಸ್ತೆಗೆ ಬಡಿದು ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತರು ತಂದೆ-ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
- Advertisement -