- Advertisement -
- Advertisement -
ಬೆಂಗಳೂರು: 545 ಪಿಎಸ್ಐ ನೇಮಕಾತಿಯನ್ನು ಮಾಡಿದ್ದ ಪರೀಕ್ಷೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿದ್ದು, ಮರು ಪರೀಕ್ಷೆ ನಡೆಸಲು ಸರಕಾರ ಫ್ಲಾನ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶೀಘ್ರದಲ್ಲೇ ಪರೀಕ್ಷೆಯ ದಿನಾಂಕ ನಿಗದಿಪಡಿಸುತ್ತೇವೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇಂದು ಡಿಜಿ ಪ್ರವೀಣ್ ಸೂದ್ , ಪೊಲೀಸ್ ಆಯುಕ್ತ ಕಮಲ್ ಪಂತ್. ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ ನಡೆಸಿದ್ದರು. ಸಭೆಯ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.
- Advertisement -