Thursday, May 9, 2024
spot_imgspot_img
spot_imgspot_img

ಪುಂಜಾಲಕಟ್ಟೆ: ಗೂಡ್ಸ್ ಟೆಂಪೊ ಹಾಗೂ ಪಿಕಪ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಪಿಕಪ್‌ ಚಾಲಕ ಮೃತ್ಯು

- Advertisement -G L Acharya panikkar
- Advertisement -

ಪುಂಜಾಲಕಟ್ಟೆ: ಶ್ರೀ ರಾಮನಗರ ಪ್ರಗತಿ ಹಾರ್ಡ್ ವೇರ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಕಪ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪಾಂಡವರಕಲ್ಲು ಕುದ್ರು ನಿವಾಸಿ ಇಬ್ರಾಹಿಂ ಅವರ ಪುತ್ರ ಸಾಹಿಲ್ (21) ಮೃತಪಟ್ಟ ದುರ್ದೈವಿ.

ಗೂಡ್ಸ್ ಟೆಂಪೊ ಹಾಗೂ ಪಿಕಪ್ ನಡುವೆ ನಡೆದ ಅಪಘಾತದಲ್ಲಿ ಪಿಕಪ್ ನಲ್ಲಿದ್ದ ಸಾಹಿಲ್ ಹಾಗೂ ಅವಿನಾಶ್ ಮತ್ತು ಮಿನಿ ಲಾರಿ ಚಾಲಕ ಧೀರಜ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ತಲೆ ಮತ್ತು ಎದೆಗೆ ಏಟಾಗಿದ್ದ ಸಾಹಿಲ್ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಕೊನೆಯುಸಿರೆಳೆದಿದ್ದರು.

ಇಬ್ರಾಹಿಂ ಅವರ ನಾಲ್ವರು ಮಕ್ಕಳಲ್ಲಿ ಸಾಹಿಲ್ ಕೊನೆಯವರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದು ಬಿಡುವಿನ ವೇಳೆಯಲ್ಲಿ ಚಾಲಕರಾಗಿ ದುಡಿಯುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಮೂವರು ಸಹೋದರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!