- Advertisement -
- Advertisement -
ಬೆಳ್ತಂಗಡಿ: ಬೆಳ್ತಂಗಡಿ ಸಮೀಪದ ಕಾಪಿನ ಬಾಗಿಲು ಎಂಬ ಪ್ರದೇಶದಲ್ಲಿ ಅನ್ಯ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ.
ಗದಗ ಮೂಲದ ರಫೀಕ್ (21) ಎಂಬಾತ ಗದಗ ಮೂಲದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು ಖಾಸಗಿ ಲಾಡ್ಜ್ ಬುಕ್ಕಿಂಗ್ ಗಾಗಿ ಬಂದಿರುತ್ತಾರೆ ಎನ್ನಲಾಗಿದೆ.
ಅನ್ಯ ಮತೀಯ ಜೋಡಿ ಎಂದು ತಿಳಿದ ಕೂಡಲೆ ಲಾಡ್ಜ್ ಸಿಬ್ಬಂದಿಯು, ರೂಮ್ ನೀಡಲು ನಿರಾಕರಿಸಿದ್ದಾರೆ. ಆಗ ಅವರು ತಕ್ಷಣ ಅಲ್ಲಿಂದ ಮರಳಿ ಬೆಂಗಳೂರು ಕಡೆಗೆ ಎಸ್ಕೆಪ್ ಆಗಲು ಬಸ್ ಹತ್ತಿದ್ದರು. ಕೊಕ್ಕಡದಲ್ಲಿ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ಅಡ್ಡಗಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಂತರ ಜೋಡಿಯನ್ನು ನೇಲ್ಯಾಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಯುವತಿಯು ಒಂದು ವಿದ್ಯಾ ಸಂಸ್ಥೆಯಲ್ಲಿ ಲೆಕ್ಚರ್ ಎಂದು ವಿಚಾರಿಸಿದಾಗ ತಿಳಿದು ಬಂದಿದೆ ತನ್ನ ಮನೆಯವರ ನಂಬರ್ ನೀಡಲು ನಿರಾಕರಿಸಿದ್ದಾಳೆ. ಪೋಲಿಸ್ ವಿಚಾರಣೆ ಸಾಗಿದೆ ಎನ್ನಲಾಗಿದೆ.
- Advertisement -