- Advertisement -
- Advertisement -
ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ ಸಮಸ್ಯೆಯಾಗಿದ್ದು ಮಳೆಗಾಲದಲ್ಲಿ ಶಾಲೆಗೆ ಮಕ್ಕಳು ತೆರಳಲೂ ಸಾಧ್ಯವಾಗುತ್ತಿಲ್ಲ. ಸೇತುವೆ ನಿರ್ಮಾಣ ಮಾಡಿಕೊಡುವಂತೆ ಕಾಲನಿ ನಿವಾಸಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸ್ಥಳೀಯರು, ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.
- Advertisement -