- Advertisement -
- Advertisement -
ಪುತ್ತೂರು: ಎಸ್.ಡಿ.ಪಿ.ಐ.ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜೈಲಿನಲ್ಲಿ ಇದ್ದುಕೊಂಡೇ ಶಾಫಿ ಬೆಳ್ಳಾರೆ ಎಲೆಕ್ಷನ್ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ.
ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೆರವಣಿಗೆ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಫಿ ಬೆಳ್ಳಾರೆ, ಪುತ್ತೂರು ಎಸ್.ಡಿ.ಪಿ.ಐ. ಅಭ್ಯರ್ಥಿಯಾಗಿದ್ದಾರೆ. ಶಾಫಿ ಬೆಳ್ಳಾರೆಯವರ ಪರವಾಗಿ ಎಲೆಕ್ಷನ್ ಏಜೆಂಟ್ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದ್ದಾರೆ.
- Advertisement -