ಪುತ್ತೂರಿನ ಪ್ರಪ್ರಥಮ ಸರ್ವಸುಸಜ್ಜಿತ ಶಾಪಿಂಗ್ ಮಾಲ್ ‘ಜಿಎಲ್ ಒನ್’ ಇದರ ಲೋಕಾರ್ಪಣಾ ಸಮಾರಂಭವು ಎ.2 ರಂದು ಸಂಜೆ 5.30ಕ್ಕೆ ನಡೆಯಲಿದೆ.
ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರರವರು ಕಟ್ಟಡ ಲೋಕಾರ್ಪಣೆಯನ್ನು ನೆರವೇರಿಸಲಿದ್ದಾರೆ.
ಲಾಂಛನದ ಅನಾವರಣವನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಸಂಜೀವ ಮಠಂದೂರು, ಪುತ್ತೂರು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಎಸ್.ಜಿ ಕಾರ್ಪೋರೇಟ್ಸ್ ಚೇರ್ಮೆನ್ ಕೆ. ಸತ್ಯಶಂಕರ್, ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಪುತ್ತೂರು ಛೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ನ ಅಧ್ಯಕ್ಷರಾದ ಜಾನ್ ಕುಟಿನ್ಹಾ, ಭಾರತ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಆನಂದ್ ಪೈ ಪುತ್ತೂರು ಅನ್ಸಾರುದ್ದೀನ್ ಜಮಾತ್ ಸಮಿತಿಯ ಎಲ್.ಟಿ. ಅಬ್ದುಲ್ ರಝಕ್ ರವರು ಭಾಗವಹಿಸಲಿದ್ದಾರೆ.