Thursday, April 25, 2024
spot_imgspot_img
spot_imgspot_img

ಪುತ್ತೂರು: ಕಬಕ ಗ್ರಾ.ಪಂ ನಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿದ ಪ್ರಕರಣ; ಏಳಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲು; ಮೂವರಿಗೆ ನ್ಯಾಯಾಂಗ ಬಂಧನ

- Advertisement -G L Acharya panikkar
- Advertisement -

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಏಳಕ್ಕೂ ಅಧಿಕ ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

ಅಜೀಜ್, ನೌಷದ್, ಶಮೀರ್, ಹಾರೀಸ್, ಅದ್ದು, ತೌಸೀಪ್, ಶಾಫಿ ಹಾಗೂ ಇತರರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜೀಜ್, ಶಮೀರ್, ಅಬ್ದುಲ್ ರಹಿಮಾನ್ ಮೂವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಬಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೀಡಿರುವ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ. ಕ್ರ: 61/2021 ಕಲಂ: 143,147,269,353,323,427 ಜೊತೆಗೆ 149 ಐ.ಪಿ.ಸಿ ಮತ್ತು 2(A) KPDLP ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

driving
- Advertisement -

Related news

error: Content is protected !!