Wednesday, May 15, 2024
spot_imgspot_img
spot_imgspot_img

ಪುತ್ತೂರು: ಕಬಕ ಚಲೋಗೆ ಚಾಲನೆ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗಿ

- Advertisement -G L Acharya panikkar
- Advertisement -
driving

ಪುತ್ತೂರು: ಕಬಕದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜನಜಾಗೃತಿ ಗ್ರಾಮ ಸ್ವರಾಜ್ಯ ರಥಯಾತ್ರೆ ಹೊರಟ್ಟಿದ್ದ ಸಂದರ್ಭದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ರಥಕ್ಕೆ ತಡೆ ಒಡ್ಡಿದಲ್ಲದೇ ವೀರ ಸಾವರ್ಕರ್ ಭಾವ ಚಿತ್ರ ತೆಗೆದು ಟಿಪ್ಪು ಭಾವಚಿತ್ರ ಅಳವಡಿಸುವಂತೆ ಆಗ್ರಹಿಸಿದರು ಈ ಹಿನ್ನಲೆ ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಬಕದ ತನಕ ವೀರ ಸಾವರ್ಕರ್ ಭಾವ ಚಿತ್ರ ಹೊತ್ತ ಜಾಗೃತಿ ರಥಯಾತ್ರೆ ಆರಂಭಗೊಂಡಿತು. ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಡಾ. ಎಂ ಕೆ ಪ್ರಸಾದ್ ಅವರು ರಥಕ್ಕೆ ಚಾಲನೆ ನೀಡಿದರು. ಈ ವೇಳೆ ಹಿಂದು ಜಾಗರಣ ವೇದಿಕೆಯ ಟಿ.ಜಿ ರಾಜರಾಮ ಭಟ್, ಮೈತ್ರಿಯ ಗುರುಕುಲದ ಸುಬ್ರಹ್ಮಣ್ಯ, ಅಜಿತ್ ಹೊಸಮನೆ, ಚಿನ್ನಯ್ ಈಶ್ವರಮಂಗಲ, ದಿನೇಶ್ ಪಂಜಿಗ, ಅಶೋಕ್ ತ್ಯಾಗರಾಜನಗರ, ಗಣರಾಜ ಭಟ್ ಕೆದಿಲ,

ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ವಿಶ್ವಹಿಂದುಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಕಾರ್ಯದರ್ಶಿ ಸತೀಶ್ ಭಟ್, ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ರಾಜೇಶ್ ಪಚ್ಚೋಡಿ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಬಿಜೆಪಿ ನಗರಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ಯುವರಾಜ್ ಪೆರಿಯತ್ತೋಡಿ, ಜಿಲ್ಲಾ ಸಮಿತಿ ಕಾರ್ಯದರ್ಶಿ ಜಯಂತಿ ನಾಯಕ್.

ಬಿಜೆಪಿ ಗ್ರಾಮಾಂತರ ಮಂಡಲದ ಯುವ ಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು, ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನಗ ಶೆಣೈ, ಹಿಂದುಳಿದ ಮೋರ್ಚಾ ಅಧ್ಯಕ್ಷ ಸುನಿಲ್ ದಡ್ಡು, ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಮ್ ದಾಸ್ ಹಾರಾಡಿ.

ಬಿಜೆಪಿ ಯುವಮೋರ್ಚಾ ಸದಸ್ಯ ಕಿರಣ್ ಶಂಕರ್ ಮಲ್ಯ, ಮನೀಶ್ ಕುಲಾಲ್, ಮೋಹಿನಿ ದಿವಾಕರ್, ಪುರುಷೋತ್ತಮ ಕೋಲ್ಪೆ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ರತನ್ ರೈ ಕುಂಬ್ರ, ಪ್ರಸಾದ್ ಶೆಟ್ಡಿ, ನಗರಸಭೆ ಮಾಜಿ ಉಪಾಧ್ಯಕ್ಷ ವಿಶ್ವನಾಥ ಗೌಡ, ಬಿಜೆಪಿ ಸುಳ್ಯ ಕ್ಷೇತ್ರದ ರಾಕೇಶ್ ರೈ ಕೆಡೆಂಜಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!