Sunday, July 6, 2025
spot_imgspot_img
spot_imgspot_img

ಪುತ್ತೂರು: ಕಾಂಗ್ರೆಸ್ ನಾಯಕಿ ವೀಣಾ ಪಿ. ಭಟ್ ವಿರುದ್ಧ ಫೇಸ್ ಬುಕ್ ನಲ್ಲಿ ಅಶ್ಲೀಲ ಕಮೆಂಟ್; ಆರೋಪಿ ಪೊಲೀಸ್ ವಶಕ್ಕೆ

- Advertisement -
- Advertisement -

ಪುತ್ತೂರು: ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ.ಪಿ ಭಟ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಫೇಸ್‌ಬುಕ್‌ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯ ಕುರಿತು ವೀಣಾ ಪಿ ಭಟ್ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಭಾಸ್ಕರ ಮಣಿಯಾಣಿ ಎಂಬವರು ವೀಣಾ ಪಿ ಭಟ್ ರವರ ಬಗ್ಗೆ ಆಕ್ಷೇಪಾರ್ಹ ಅಶ್ಲೀಲ ಮತ್ತು ಮಾನಹಾನಿಕರ ಕಮೆಂಟ್ ಫೇಸ್ಬುಕ್‌ನಲ್ಲಿ ಹಾಕಿದ್ದರು.

ಈ ಬಗ್ಗೆ ಪೊಲಿಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಾಕಿರುವ ಕಮೆಂಟ್‌ನ್ನು ಅಳಿಸಿ ಹಾಕಿಸಿದ್ದಾರೆ. ಬಳಿಕ ಆರೋಪಿ ಮತ್ತು ದೂರುದಾರ ವೀಣಾ ಪಿ ಭಟ್‌ರವರ ಸಮಕ್ಷಮ ವಿಚಾರಣೆ ನಡೆಸಿದಾಗ ಆರೋಪಿ ತನ್ನೊಪ್ಪಿಕೊಂಡಿದ್ದು, ಆರೋಪಿ ಕ್ಷಮೆ ಕೇಳಿದ ಬಳಿಕ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ ಎಂದು ವೀಣಾ ಪಿ ಭಟ್ ರವರು ತಿಳಿಸಿದ್ದಾರೆ.

- Advertisement -

Related news

error: Content is protected !!