Friday, May 17, 2024
spot_imgspot_img
spot_imgspot_img

ಪುತ್ತೂರು: ಕಾರು ಹಾಗೂ ಬಸ್ ಡಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು

- Advertisement -G L Acharya panikkar
- Advertisement -

ಪುತ್ತೂರು: ಕಾರು ಹಾಗೂ KSRTC ಬಸ್ ಮುಖಾಮುಖಿ ಢಿಕ್ಕಿಯಾಗಿ ಕಾರು ಹಾಗೂ ಬಸ್ಸು ಜಖಂಗೊಂಡ ಘಟನೆ ಪುತ್ತೂರು–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ನಡೆದಿದೆ.

ಕೋಡಿಂಬಾಡಿಯ ವಿನಾಯಕ ನಗರದ ಬಳಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನಕ್ಕೆ ತೆರಳುವ ದ್ವಾರದ ಬಳಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸುತ್ತಿದ್ದ ರಾಜಹಂಸ ಬಸ್ ಹಾಗೂ ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರು ಅಪಘಾತಕ್ಕೆ ಒಳಗಾದ ವಾಹನಗಳು.

ಕೇರಳ ನೋಂದಣಿ ಹೊಂದಿದ್ದ ಕಾರು ಆಗಿದ್ದು, ಕಾರು ಮುಂಭಾಗ ಸಂಪೂರ್ಣ ಜಖಂಗೊಂಡರು ಅಪಘಾತದಲ್ಲಿ ಯಾರಿಗೂ ಯಾವುದೇ ರೀತಿಯ ತರಚು ಗಾಯಗಳು ಆಗಿಲ್ಲ ಎಂದು ತಿಳಿದು ಬಂದಿದೆ. ಅಪಘಾತದಿಂದ ವಾಹನ ಸಂಚಾರ ತೊಡಕು ಉಂಟಾಗಿತ್ತು. ಕೂಡಲೇ ಸ್ಥಳೀಯರು ರಸ್ತೆ ತೆರವು ಮಾಡುವ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

vtv vitla
- Advertisement -

Related news

error: Content is protected !!