Saturday, April 27, 2024
spot_imgspot_img
spot_imgspot_img

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆಯ ಪ್ರಮುಖ ಆರೋಪಿ ಚರಣ್‌ ಹತ್ಯೆ..! ಚೌತಿಯ ರಾತ್ರಿಯಂದು ನೆತ್ತರು ಹರಿಸಿದವ ಹಾಡಹಗಲೇ ಕೊಲೆಯಾದ..!

- Advertisement -G L Acharya panikkar
- Advertisement -

ಪುತ್ತೂರು: 2019 ಸೆ. 3ರ ಚೌತಿಯ ರಾತ್ರಿಯಂದು ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿಯಾಗಿದ್ದ ಕಾರ್ತಿಕ್‌ ಮೇರ್ಲ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು.

ಈ ಪ್ರಕರಣದ ಪ್ರಮುಖ ಆರೋಪಿ ಚರಣ್ ಎಂಬಾತ ಕೂಡ ಇಂದು ಕೊಲೆಯಾಗಿದ್ದಾನೆ. ಮೇಲ್ನೋಟಕ್ಕೆ ಕೊಲೆಗೆ ಪ್ರತೀಕಾರ ಎಂಬಂತೆ ಕಾಣುತ್ತಿದೆ. ಪುತ್ತೂರಿನ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ ಎಂಬಾತನನ್ನು ಹಾಡಹಗಲೇ ಕೊಲೆ ಮಾಡಲಾಗಿದೆ.

ಕಾರ್ತಿಕ್ ಮೇರ್ಲ

ಚರಣ್ ರಾಜ್ ರೈ ಅವರ ಮೆಡಿಕಲ್ ಶಾಪ್‌ ನಾಳೆ ಪೆರ್ಲಂಪಾಡಿಯಲ್ಲಿ ಆರಂಭಗೊಳ್ಳಲಿದ್ದು ಈ ಹಿನ್ನಲೆ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದು ತಲ್ವಾರಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿದೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

ಚೌತಿಯ ರಾತ್ರಿಯಂದು ನಡೆದಿತ್ತು ಘೋರ ಕೃತ್ಯ
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ಸಾರ್ವಜನಿಕರೆದುರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಸಂಪ್ಯದಲ್ಲಿ ನಡೆದಿತ್ತು. ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಗಣೇಶೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸಾರ್ವಜನಿಕರ ಎದುರಲ್ಲೇ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಯುವಕ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಹಣವನ್ನು ಪಡೆದಿದ್ದನು. ಈ ವಿಚಾರಕ್ಕೆ ಕೆಲ ಯುವಕರು ಕಾರ್ತಿಕ್ ಜೊತೆ ಜಗಳಕ್ಕಿಳಿದಿದ್ದರು. ಮಾತಿಗೆ ಮಾತು ಬೆಳೆದು ಜಗಳ ತಾರಕ್ಕಕ್ಕೇರಿ ಕೋಪಗೊಂಡ ಯುವಕರ ಗುಂಪು ಕಾರ್ತಿಕ್‍ಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದರು.

- Advertisement -

Related news

error: Content is protected !!