- Advertisement -
- Advertisement -
ಪುತ್ತೂರು: ಕರ್ತವ್ಯದ ನಿರತ ಕೆಎಸ್ಆರ್ಟಿಸಿ ನಿರ್ವಾಹಕಿಗೆ ಪ್ರಯಾಣಿಕನೋರ್ವ ಬಸ್ನಲ್ಲಿಯೇ ಹಲ್ಲೆ ನಡೆಸಿದ ಘಟನೆ ಮಹಾವೀರ ಆಸ್ಪತ್ರೆ ಬಳಿ ನಡೆದಿದೆ.
ನಿರ್ವಾಹಕಿ ವಿಜಯ ಎಂಬವರು ಹಲ್ಲೆಗೊಳಗಾಗಿದ್ದು, ಅದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಹಸನ್ ಎಂಬಾತ ಹಲ್ಲೆ ನಡೆಸಿದ ವ್ಯಕ್ತಿ ಎಂದು ಆರೋಪಿಸಲಾಗಿದೆ.
ಮಂಗಳೂರು-ಪುತ್ತೂರು ಕೆಎಸ್ಆರ್ಟಿಸಿ ಬಸ್ನಲ್ಲಿ ಕರ್ತವ್ಯದಲ್ಲಿದ್ದಾಗ ಬಸ್ನಲ್ಲಿದ್ದ ವಿಕಲಾಂಗ ಪ್ರಯಾಣಿಕರೋರ್ವರಿಗೆ ಸೀಟು ಬಿಟ್ಟು ಕೊಡುವಂತೆ ಕೇಳಿದಾಗ ಆಕ್ಷೇಪಿಸಿದ ಹಸನ್ ನನ್ನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ ,ಪುತ್ತೂರು ಆಸ್ಪ ತ್ರೆಯಲ್ಲಿ ದಾಖಲಾಗಿರುವ ಗಾಯಾಳು ನಿರ್ವಾಹಕಿ ವಿಜಯ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ನಿರ್ವಾಹಕಿಗೆ ಹಲ್ಲೆ ನಡೆಸಿದ ಆರೋಪಿ ಹಸನ್ ಎಂಬಾತನನ್ನು 24 ಗಂಟೆಯೊಳಗೆ ಬಂಧಿಸಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಕೆಎಸ್ಆರ್ಟಿಸಿ ಮಜ್ದೂರ್ ಸಂಘ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.
- Advertisement -